ADVERTISEMENT

ಮಡಿಕೇರಿ: ಹುಲಿ ದಾಳಿ, ಹಸು ಸಾವು

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 8:42 IST
Last Updated 23 ಜೂನ್ 2022, 8:42 IST

ಮಡಿಕೇರಿ: ಸಿದ್ದಾಪುರ ಸಮೀಪದ ಪಾಲಿಬೆಟ್ಟದ ಚೆಟ್ಟಿನಾಡ್ ಎಸ್ಟೇಟ್ ನಲ್ಲಿ ಗುರುವಾರ ನಸುಕಿನಲ್ಲಿ ಹುಲಿಯೊಂದು ದಾಳಿ ನಡೆಸಿ ಹಸುವನ್ನು ಕೊಂದಿದೆ.

ತೋಟದ ರಸ್ತೆಯ ಮೂಲಕ ಸತ್ತ ಹಸುವನ್ನು ಹುಲಿಯು ತೋಟದ ಒಳಭಾಗಕ್ಕೆ ಎಳೆದೊಯ್ದಿದೆ. ದನದ ಕಾಲಿನ ಭಾಗವನ್ನು ತಿಂದುಹಾಕಿದ್ದು, ಕೆಲಸಕ್ಕೆ ತೆರಳುವ ವೇಳೆ ಕಾರ್ಮಿಕರು ದನದ ಕಳೇಬರ ನೋಡಿದ್ದಾರೆ. ಹುಲಿ ಹೆಜ್ಜೆ ಗುರುತು ಕಂಡ ಅವರು ಕೆಲಸ ಸ್ಥಗಿತಗೊಳಿಸಿ, ಮನೆಗಳಿಗೆ ಹಿಂತಿರುಗಿದ್ದಾರೆ.

ಅಧಿಕಾರಿಗಳ ಭೇಟಿ: ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಕಾರ್ಮಿಕರಿಂದ ಮಾಹಿತಿ ಪಡೆದರು. ಈ ಎಸ್ಟೇಟ್ ನಲ್ಲಿ ಸುಮಾರು ನೂರಕ್ಕೂ ಅಧಿಕ ಕಾಡುದನಗಳಿದ್ದು, ಹುಲಿ ದಾಳಿ ನಡೆಸಿರುವುದು ತಿಳಿದು ಬಂದಿದೆ. ಹುಲಿ ಪತ್ತೆಗೆ ಕ್ಯಾಮರಾ ಅಳವಡಿಸಲಾಗಿದೆ. ಮೇಲಧಿಕಾರಿಗಳ ಗಮನಕ್ಕೆ ವಿಷಯವನ್ನು ತರಲಾಗಿದ್ದು, ನಾಳೆಯಿಂದ ಹುಲಿ ಪತ್ತೆ ಕಾರ್ಯಾಚರಣೆ ಮಾಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಕಳ್ಳೀರ ದೇವಯ್ಯ ತಿಳಿಸಿದರು. ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಸಂಜೀತ್ ಸೋಮಯ್ಯ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT