ADVERTISEMENT

ವಿರಾಜಪೇಟೆ: ಹುಲಿ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 14:42 IST
Last Updated 28 ಜೂನ್ 2022, 14:42 IST
ಹುಲಿಯ ಮೃತದೇಹ
ಹುಲಿಯ ಮೃತದೇಹ   

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ನಾಂಗಾ‌ಲ ಗ್ರಾಮದಲ್ಲಿ ಮಂಗಳವಾರ ಹುಲಿಯೊಂದರ ಮೃತದೇಹ ಪತ್ತೆಯಾಗಿದ್ದು, ದೇಹದ ಮೇಲೆ ಗುಂಡೇಟಿನ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆಯಷ್ಟೆ ಕಾರ್ಮಿಕರೊಬ್ಬರು ಹುಲಿ ದಾಳಿಗೆ ಮೃತಪಟ್ಟಿದ್ದರು. ಬಳಿಕ ಹುಲಿಯನ್ನು ಗುಂಡಿಕ್ಕಿ ಕೊಲ್ಲಬೇಕೆಂದು‌ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿದ್ದರೂ ಹುಲಿ ಪತ್ತೆ ಆಗಿರಲಿಲ್ಲ. ಆದರೆ, ಜಾನುವಾರುಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಹುಲಿ ಕೊಲ್ಲುತ್ತಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.