ADVERTISEMENT

ಮಡಿಕೇರಿ: ವಿಎಚ್‌ಪಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರು ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 5:00 IST
Last Updated 10 ನವೆಂಬರ್ 2021, 5:00 IST
ಮಡಿಕೇರಿ: ವಿಎಚ್‌ಪಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರು ಪೊಲೀಸ್ ವಶಕ್ಕೆ
ಮಡಿಕೇರಿ: ವಿಎಚ್‌ಪಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರು ಪೊಲೀಸ್ ವಶಕ್ಕೆ   

ಮಡಿಕೇರಿ: ನಗರದ ಓಂಕಾರೇಶ್ವರ ದೇಗುಲದಲ್ಲಿ ಶಾಂತಿಪೂಜೆ ನೆರವೇರಿಸಿ ಹೊರಬರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಬಂಧನ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಹಾಗೂ ವಿಎಚ್‌ಪಿ ಮುಖಂಡರು ಆಕ್ರೋಶ ಹೊರಹಾಕಿದರು.

2015ರ ನವೆಂಬರ್ 10ರಂದು ನಗರದಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥವಾಗಿ ಹಿಂದೂ ಜಾಗರಣಾ ವೇದಿಕೆ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ಓಂಕಾರೇಶ್ವರ ಸೇರಿ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಶಾಂತಿಪೂಜೆ ನೆರವೇರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.