ADVERTISEMENT

ಕುಶಾಲನಗರ: ಸೆಲ್ಫಿ ತೆಗೆಯುವ ವೇಳೆ ನೀರಿಗೆ ಬಿದ್ದ ಪ್ರವಾಸಿಗ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 15:49 IST
Last Updated 3 ಆಗಸ್ಟ್ 2023, 15:49 IST
ಕೊಡಗು ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆಯಿಂದ ಜಾರಿಬಿದ್ದ ಪ್ರವಾಸಿಗ ಸಂದೀಪ ಅವರಿಗಾಗಿ ಗುರುವಾರ ಶೋಧ ಕಾರ್ಯ ನಡೆಯಿತು
ಕೊಡಗು ಜಿಲ್ಲೆಯ ಕುಶಾಲನಗರದ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆಯಿಂದ ಜಾರಿಬಿದ್ದ ಪ್ರವಾಸಿಗ ಸಂದೀಪ ಅವರಿಗಾಗಿ ಗುರುವಾರ ಶೋಧ ಕಾರ್ಯ ನಡೆಯಿತು   

ಕುಶಾಲನಗರ: ಇಲ್ಲಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ಗುರುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಬೆಂಗಳೂರಿನ ವಿದ್ಯಾರಣ್ಯಪುರಂ ಸಂದೀಪ (46) ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಅಗ್ನಿಶಾಮಕ–ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

‘ಬೆಂಗಳೂರಿನಲ್ಲಿ ಟ್ಯಾಟೊ ಕಲಾವಿದರಾಗಿದ್ದು,‌ ಸಾಕುನಾಯಿಗಳ ಮಾರಾಟವನ್ನೂ ಮಾಡುತ್ತಿದ್ದ ಸಂದೀಪ ಅವರು, ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT