ಕುಶಾಲನಗರ: ಇಲ್ಲಿನ ಹಾರಂಗಿ ಜಲಾಶಯದ ಕೆಳಭಾಗದ ಸೇತುವೆ ಮೇಲೆ ಗುರುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಬೆಂಗಳೂರಿನ ವಿದ್ಯಾರಣ್ಯಪುರಂ ಸಂದೀಪ (46) ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಅಗ್ನಿಶಾಮಕ–ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.
‘ಬೆಂಗಳೂರಿನಲ್ಲಿ ಟ್ಯಾಟೊ ಕಲಾವಿದರಾಗಿದ್ದು, ಸಾಕುನಾಯಿಗಳ ಮಾರಾಟವನ್ನೂ ಮಾಡುತ್ತಿದ್ದ ಸಂದೀಪ ಅವರು, ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.