ADVERTISEMENT

10 ಆದಿವಾಸಿ ಕುಟುಂಬಗಳಿಗೆ ಉಚಿತ ಮನೆ ನಿರ್ಮಾಣ

ಕಟ್ಟೆಹಾಡಿಯಲ್ಲಿ ವಾಸಿಸುತ್ತಿರುವ ವಸತಿ ರಹಿತ ಕುಟುಂಬಗಳು

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2025, 3:13 IST
Last Updated 13 ಡಿಸೆಂಬರ್ 2025, 3:13 IST
ಕುಶಾಲನಗರ ಸಮೀಪದ ಕಟ್ಟೆಹಾಡಿಯ ವಸತಿ ರಹಿತ ಆದಿವಾಸಿ ಕುಟುಂಬಗಳಿಗೆ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ವತಿಯಿಂದ ಉಚಿತವಾಗಿ ನೂತನ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದ್ದು,ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ವೈ.ಕೆ.ಶಶಿಕುಮಾರ್ ಅವರು ಶುಕ್ರವಾರ ತಲಾ ಐದು ಲಕ್ಷ ಮೊತ್ತದ ಚೆಕ್ ಅನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.
ಕುಶಾಲನಗರ ಸಮೀಪದ ಕಟ್ಟೆಹಾಡಿಯ ವಸತಿ ರಹಿತ ಆದಿವಾಸಿ ಕುಟುಂಬಗಳಿಗೆ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ವತಿಯಿಂದ ಉಚಿತವಾಗಿ ನೂತನ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದ್ದು,ಸಂಸ್ಥೆ ರಾಷ್ಟ್ರೀಯ ಅಧ್ಯಕ್ಷ ವೈ.ಕೆ.ಶಶಿಕುಮಾರ್ ಅವರು ಶುಕ್ರವಾರ ತಲಾ ಐದು ಲಕ್ಷ ಮೊತ್ತದ ಚೆಕ್ ಅನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.   

ಕುಶಾಲನಗರ: ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಹಾಡಿಯಲ್ಲಿ ವಾಸಿಸುತ್ತಿರುವ ವಸತಿ ರಹಿತ 10 ಆದಿವಾಸಿ ಕುಟುಂಬಗಳಿಗೆ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ವತಿಯಿಂದ ಉಚಿತವಾಗಿ ನೂತನ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದೆ. ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ವೈ.ಕೆ.ಶಶಿಕುಮಾರ್ ಶುಕ್ರವಾರ ತಲಾ ₹ 5 ಲಕ್ಷ ಮೊತ್ತದ ಚೆಕ್ ಅನ್ನು ಫಲಾನುಭವಿಗಳಿಗೆ ವಿತರಿಸಿದರು.

ಕಟ್ಟೆಹಾಡಿಯ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವೈ.ಕೆ.ಶಶಿಕುಮಾರ್, ‘ಬಡತನ ಮುಕ್ತ ಭಾರತ ಆಗಬೇಕು ಎಂಬುದು ನಮ್ಮ ಸಂಸ್ಥೆಯ ಉದ್ದೇಶ. ಪ್ರತಿ ಮನೆಗೆ ಆರೋಗ್ಯ ಹಾಗೂ ಆರ್ಥಿಕ ನೆರವಿನೊಂದಿಗೆ ಬಡತನ ನಿರ್ಮೂಲನೆ ಗುರಿ ಹೊಂದಲಾಗಿದೆ. ಪ್ರತಿಯೊಂದು ಕುಟುಂಬಕ್ಕೆ ಆತ್ಮಶಕ್ತಿ, ಮನೆಯಿಲ್ಲದ‌ ಬಡ ಕುಟುಂಬಕ್ಕೆ ಮನೆ ನಿರ್ಮಾಣ‌ ನಮ್ಮ ಆದ್ಯ ಗುರಿಯಾಗಿದೆ’ ಎಂದರು.

‘ನಮ್ಮ ಎನ್.ಜಿ.ಒ ವತಿಯಿಂದ ಸದಸ್ಯತ್ವ ಅಭಿಯಾನ ಕೈಗೊಳ್ಳಲಾಗಿದ್ದು, ಸದಸ್ಯರಾದವರಿಗೆ ಜೀವವಿಮೆ ಸೌಲಭ್ಯ, ಹೆಣ್ಣು ಮಕ್ಕಳ ಮದುವೆಗೆ ಸಹಾಯಧನ, ಅಂಗವಿಕಲರಿಗೆ, ವೃದ್ಧರಿಗೆ ಸಹಾಯಧನ ಹಾಗೂ ಶವಸಂಸ್ಕಾರಕ್ಕೆ ನೆರವು ಸೇರಿದಂತೆ ಸ್ವಯಂ ಉದ್ಯೋಗ ಕೈಗೊಂಡು ಸಬಲೀಕರಣ ಹೊಂದಲು ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ’ ಎಂದು ಹೇಳಿದರು.

ADVERTISEMENT

ಸಂಸ್ಥೆಯ ಸಂಚಾಲಕಿ ಫ್ರಾನ್ಸಿನ ಮೇರಿ ಮಾತನಾಡಿ, ‘ನಮ್ಮ ನಡೆ ಬಡತನ ನಿರ್ಮೂಲನೆ ಕಡೆಗೆ ಎಂಬುವುದು ನಮ್ಮ ಸಂಸ್ಥೆಯ ಧ್ಯೇಯವಾಗಿದೆ. 8 ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಸಂಸ್ಥೆ ಸರ್ವೇ ಮಾಡಿ ಸರ್ಕಾರದ ಸೌಲಭ್ಯಗಳಿಂದ ವಂಚಿತ ಕುಟುಂಬಗಳನ್ನು ಗುರುತಿಸಿ ಅಗತ್ಯ ನೆರವು ನೀಡಲಾಗುತ್ತದೆ’ ಎಂದರು.

ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯರು ಆದ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ಕೊಡಗು ಘಟಕದ ಜಿಲ್ಲಾಧ್ಯಕ್ಷ ಆರ್.ಕೆ.ಚಂದ್ರು ಮಾತನಾಡಿ, ‘ಆದಿವಾಸಿಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಅವು ಅರ್ಹ ಗಿರಿಜನ ಕುಟುಂಬಗಳಿಗೆ ತಲುಪುತ್ತಿಲ್ಲ. ಬಹುತೇಕ ಯೋಜನೆಗಳು ಗಿರಿಜನರ ಹೆಸರಿನಲ್ಲಿ ಉಳ್ಳವರ ಪಾಲಾಗುತ್ತಿವೆ’ ಎಂದರು.

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಇಂತಹ ಬಡ ಕುಟುಂಬಗಳನ್ನು ಗುರುತಿಸಿ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ವತಿಯಿಂದ ಉಚಿತವಾಗಿ ಮನೆ ನಿರ್ಮಿಸಿಕೊಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾಗಿದೆ. ಎನ್.ಜಿ.ಒ.ಸೇವೆ ಇದೇ ರೀತಿ ಮುಂದುವರೆಯಲಿ ಇದರಿಂದ ಅನೇಕ ಆದಿವಾಸಿ ಕುಟುಂಬಗಳಿಗೆ ನೆರವು ಸಿಗಲಿ ಎಂದು ಹೇಳಿ ಸಂಸ್ಥೆಯ ಅಧ್ಯಕ್ಷ ಶಶಿಕುಮಾರ್ ಅವರ ಸೇವೆಯನ್ನು ಶ್ಲಾಘಿಸಿದರು.

ಈ ವೇಳೆ ಭವಾನಿಪುರ್ ಬಾಬಾ ಬದ್ರುದ್ದೀನ್ ಶಾ ವೆಲ್ವೇರ್ ಸೊಸೈಟಿ ಪದಾಧಿಕಾರಿಗಳಾದ ಬಿಂದು
ಸತೀಶ್ ಹಾಗೂ ಫಲಾನುಭವಿಗಳಾದ ಲಕ್ಷ್ಮಿ, ಗೌರಿ,ಸುಮಿತ್ರ, ರಾಧ, ಗೀತಾ, ಸಣ್ಣಮ್ಮ, ಮುತ್ತಮ್ಮ, ಶಿವಣ್ಣ ಹಾಗೂ ಹಾಡಿ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.