ADVERTISEMENT

ವಿರಾಜಪೇಟೆ: ವಾಹನ ಸಂಚಾರಕ್ಕೆ ಕಡಿವಾಣ

​ಪ್ರಜಾವಾಣಿ ವಾರ್ತೆ
Published 2 ಮೇ 2021, 6:36 IST
Last Updated 2 ಮೇ 2021, 6:36 IST
ವಿರಾಜಪೇಟೆ ಪಟ್ಟಣದ ಮುಖ್ಯರಸ್ತೆಯಲ್ಲಿ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದರು
ವಿರಾಜಪೇಟೆ ಪಟ್ಟಣದ ಮುಖ್ಯರಸ್ತೆಯಲ್ಲಿ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದರು   

ವಿರಾಜಪೇಟೆ: ಸರ್ಕಾರದ ಮಾರ್ಗಸೂಚಿಯಂತೆ ಶನಿವಾರ ನಿಗದಿತ ಅವಧಿಯನ್ನು ಹೊರತುಪಡಿಸಿ ಪಟ್ಟಣವನ್ನು ಬಂದ್ ಮಾಡಲಾಗಿತ್ತು.

ಶನಿವಾರ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು.

ಈ ಅವಧಿಯಲ್ಲಿ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಟ್ಟಣಕ್ಕೆ ಆಗಮಿಸಿ ಅಗತ್ಯ ವಸ್ತುಗಳ ಖರೀದಿ ಮಾಡಿದ್ದು ಕಂಡು ಬಂತು.

ADVERTISEMENT

ಇದರಿಂದ ಶನಿವಾರ ಪಟ್ಟಣದಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಬೆಳಿಗ್ಗೆ 10 ರ ಬಳಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ ಬಳಿಕ ಪಟ್ಟಣ ಸ್ತಬ್ಧವಾಯಿತು.

ಬೆಳಿಗ್ಗೆ 10 ರ ಬಳಿಕ ಪಟ್ಟಣದ ಮುಖ್ಯ ಭಾಗಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳಿಗೆ ಕಡಿವಾಣ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.