ಸೋಮವಾರಪೇಟೆ: ಇಲ್ಲಿನ ಕುರುಹಿನಶೆಟ್ಟಿ ಸಮಾಜದ ಶ್ರೀರಾಮ ಮಂದಿರದಲ್ಲಿ ಶುಕ್ರವಾರ 8ನೇ ವರ್ಷದ ವೈಕುಂಠ ಏಕಾದಶಿ ಮತ್ತು ಸತ್ಸಂಗ ನಡೆಯಿತು.
ದೇವಸ್ಥಾನವನ್ನು ಹೂವು, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆಗಳು ನಡೆದವು. ದೇವಸ್ಥಾನದ ಅರ್ಚಕ ಮೋಹನ್ ಶಾಸ್ತ್ರಿ ಪೂಜೆಸಿದರು.
ಸಂಜೆ 5 ಗಂಟೆಗೆ ಸೀತಾ ಬಳಗದಿಂದ ವಿಷ್ಣು ಸಹಸ್ರನಾಮ ಪಠಣೆ, 6 ಗಂಟೆಯಿಂದ ಆರ್ಟ್ ಆಫ್ ಲಿವಿಂಗ್ನ ಸ್ವಾಮಿ ಸೂರ್ಯಪಾದಜೀ ಅವರಿಂದ ಗಾನ, ಜ್ಞಾನ, ಧ್ಯಾನಗಳನ್ನು ಒಳಗೊಂಡ ಸತ್ಸಂಗ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.