ಸೋಮವಾರಪೇಟೆ: ಇಲ್ಲಿಗೆ ಸಮೀಪದ ಕೋವರ್ ಕೊಲ್ಲಿ ಟಾಟಾ ಕಾಫಿ ಸಂಸ್ಥೆಯ ವನದುರ್ಗಾದೇವಿ ದೇವಾಲಯದ 50ನೇ ವಾರ್ಷಿಕೋತ್ಸವ ಮತ್ತು ಪೂಜಾ ಕಾರ್ಯಕ್ರಮ ಈಚೆಗೆ ನಡೆಯಿತು.
ಕಾರ್ಯಕ್ರಮದ ಪ್ರಯುಕ್ತ ಬೆಳಿಗ್ಗೆ ಶ್ರೀ ಗಣಪತಿ ಹೋಮ, ವನದುರ್ಗಾದೇವಿಗೆ ಪಂಚಾಮೃತ ಅಭಿಷೇಕ, ಚಂಡಿಕಾ ಹೋಮ ಮತ್ತು ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಪೂಜಾ ಕಾರ್ಯವನ್ನು ದೇವಾಲಯದ ಅರ್ಚಕ ಬಾಲೂ ಭಟ್ ಹಾಗೂ ರಾಘವೇಂದ್ರ ಭಟ್ ಮತ್ತಿತರರು ನಡೆಸಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.