ADVERTISEMENT

ಕೊಡಗು ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್‍ ರಾಜಾ ನೇಮಕ

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 4:48 IST
Last Updated 20 ಜೂನ್ 2023, 4:48 IST
ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವೆಂಕಟ್ ರಾಜಾ
ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವೆಂಕಟ್ ರಾಜಾ   

ಮಡಿಕೇರಿ: ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್‍ ರಾಜಾ ಅವರನ್ನು ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಈವರೆಗೂ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಪಾಲಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿದೆ. ಇವರು ವರ್ಷಕ್ಕೂ ಅಧಿಕ ಸಮಯದಿಂದ ಕೊಡಗು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT