ADVERTISEMENT

ವಿರಾಜಪೇಟೆ: ಕಾಡಾನೆ ದಾಳಿಗೆ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 14:10 IST
Last Updated 5 ಜುಲೈ 2020, 14:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿರಾಜಪೇಟೆ (ಕೊಡಗು): ಸಮೀಪದ ಕೊಳ್ತೋಡು-ಬೈಗೋಡು ಗ್ರಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಯಿಂದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಗ್ರಾಮದ ಸಿ. ಸೋಮಣ್ಣ ಅವರ ಕಾಫಿ ತೋಟದ ಲೈನ್‌ಮನೆಯಲ್ಲಿ ವಾಸವಿದ್ದ ಪಣಿ ಯರವರ ಮಾದ (48) ಮೃತಪಟ್ಟ ಕಾರ್ಮಿಕ.

ಅಗತ್ಯವಸ್ತು ಖರೀದಿಸಿ ಮನೆಗೆ ವಾಪಸ್ಸಾಗುವ ವೇಳೆ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಭಾನುವಾರ ಮೃತಪಟ್ಟಿದ್ದಾರೆ.

ADVERTISEMENT

ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ, ಅರಣ್ಯಾಧಿಕಾರಿ ದಿಲೀಪ್ ಕುಮಾರ್, ಮನೋಜ್ ಕ್ರಿಸ್ಟೋಫರ್, ಉಮಾ ಶಂಕರ್, ಶ್ರೀನಿವಾಸ್, ವಿರಾಜಪೇಟೆ ಗ್ರಾಮಾಂತರ ಠಾಣೆ ‍ಪಿಎಸ್ಐ ವೀಣಾ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು.

ವಿರಾಜಪೇಟೆಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.