
ಪ್ರಜಾವಾಣಿ ವಾರ್ತೆ
ಗೋಣಿಕೊಪ್ಪಲು: ವಿರಾಜಪೇಟೆ ಸಹಕಾರ ಒಕ್ಕೂಟದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಅಲೇಮಾಡ ಸುಧೀರ್, ಉಪಾಧ್ಯಕ್ಷರಾಗಿ ಕೋಳೆರ ರಾಜ ನರೇಂದ್ರ ಅವಿರೋಧವಾಗಿ ಆಯ್ಕೆಯಾದರು.
ಈಚೆಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು. ಬಿಜೆಪಿ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಜಿಲ್ಲಾ ಕಾರ್ಯದರ್ಶಿ ನೆಲ್ಲೀರ ಚಲನ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪಕ್ಷದ ಪ್ರಮುಖರಾದ ರೀನಾ ಪ್ರಕಾಶ್, ವಿರಾಜಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜು ಗಣಪತಿ ಹಾಜರಿದ್ದರು.
ವಿರಾಜಪೇಟೆ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಅಲೇಮಾಡ ಸುಧೀರ್, ಉಪಾಧ್ಯಕ್ಷರಾದ ಕೋಳೆರ ರಾಜ ನರೇಂದ್ರ ಅವರನ್ನು ಇತರ ಸದಸ್ಯರು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.