ವಿರಾಜಪೇಟೆ: ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿ ಈಚೆಗೆ ಲೋಕಾರ್ಪಣೆಗೊಂಡ ಅಂಬೇಡ್ಕರ್ ಭವನದ ತಡೆಗೋಡೆ ಕುಸಿತಗೊಂಡಿದೆ.
10 ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿಯು ಕೆಲವು ಸಣ್ಣಪುಟ್ಟ ಕೆಲಸಗಳು ಉಳಿಕೆಯಾಗಿದ್ದವು. ಬಳಿಕ ಕೆಲ ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೊಂಡಿತ್ತು.
ಹೊಸ ಕಟ್ಟಡ ಲೋಕಾರ್ಪಣೆಯ ಕೆಲವು ದಿನಗಳಲ್ಲೇ ತಡೆಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಅನುಮಾನ ವ್ಯಕ್ತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.