ADVERTISEMENT

ಮಡಿಕೇರಿ: ಮೆಣಸು ಕೊಯ್ಯುತ್ತಿದ್ದ ಕಾರ್ಮಿಕರ ಮೇಲೆ ಆನೆ ದಾಳಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2024, 5:43 IST
Last Updated 23 ಮಾರ್ಚ್ 2024, 5:43 IST

ಮಡಿಕೇರಿ: ಇಲ್ಲಿಗೆ ಸಮೀಪದ ಅಭ್ಯತ್‌ಮಂಗಲದ ತೋಟವೊಂದರಲ್ಲಿ ಶುಕ್ರವಾರ ತಮಿಳುನಾಡಿನ ಕಾರ್ಮಿಕ ಅಣ್ಣಾಮಲೈ (50) ಅವರು ಕಾಡಾನೆಯೊಂದರ ದಾಳಿಗೆ ಸಿಲುಕಿ ಗಾಯಗೊಂಡಿದ್ದಾರೆ.

ಇವರು ಮೆಣಸು ಕೊಯ್ಯುತ್ತಿದ್ದ ವೇಳೆ ಕಾಡಾನೆ ಹೋಗುವಾಗ ತೊಡೆಯ ಭಾಗಕ್ಕೆ ತಿವಿದಿದೆ. ಇದರಿಂದ ಗಾಯಗೊಂಡ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್‌ಕುಮಾರ್ ಅವರ ನೇತೃತ್ವದಲ್ಲಿ ಆನೆಯನ್ನು ವಾಪಸ್ ಕಾಡಿಗೆ ಕಳುಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.