ADVERTISEMENT

ಕೊಡಗು: ಶೌಚಗುಂಡಿಗೆ ಬಿದ್ದ ಕಾಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2023, 6:10 IST
Last Updated 18 ಫೆಬ್ರುವರಿ 2023, 6:10 IST
   

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಎಳನೀರುಗುಂಡಿ ಎಸ್ಟೇಟ್‌ನಲ್ಲಿ ಸಿಮೆಂಟ್ ಟ್ಯಾಂಕ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿದೆ.

ಶುಕ್ರವಾರ ತಡರಾತ್ರಿ ನಿಡ್ತ ಮಿಸಲು ಅರಣ್ಯದಿಂದ ಬಂದಿದ್ದ ಈ ಹೆಣ್ಣು ಕಾಡಾನೆ ಹಳೆಯ ಸಿಮೆಂಟ್ ಗುಂಡಿಗೆ ಬಿದ್ದು ಸಾವನ್ನಪ್ಪಿದೆ ಎಂದು ಡಿಸಿಎಫ್ ಪೂವಯ್ಯ ತಿಳಿಸಿದರು.

ಇದೊಂದು ತುಂಬಾ ಹಳೆಯ ಶೌಚಗುಂಡಿ. ಸದ್ಯ ಅದನ್ನು ಬಳಕೆ ಮಾಡುತ್ತಿರಲಿಲ್ಲ. ಆನೆಯ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಸ್ಥಳಕ್ಕೆ ತೆರಳಿದ್ದ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.