ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನಕ್ಕೆ ಶನಿವಾರ ಸಂಜೆ ಸಂಗೀತ ಕಾರಂಜಿ ನಡೆಯುವ ವೇಳೆ ಕಾಡಾನೆಯೊಂದು ನುಗ್ಗಿದ್ದರಿಂದ ಪರಿಣಾಮ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು.
ಹಾರಂಗಿ ಅಣೆಕಟ್ಟೆಗೆ ಹೊಂದಿಕೊಂಡಂತೆ ಇರುವ ಅತ್ತೂರು ಮೀಸಲು ಅರಣ್ಯ ಪ್ರದೇಶದಿಂದ ಬಂದ ಕಾಡಾನೆ ಅಣೆಕಟ್ಟೆ ಉದ್ಯಾನದೊಳಗೆ ಅಡ್ಡಾಡಿದೆ. ಸಂಜೆ ಸಂಗೀತ ಕಾರಂಜಿ ವೀಕ್ಷಣೆ ಆಗಮಿಸಿದ್ದ ಪ್ರವಾಸಿಗರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಜಲಾಶಯದ ಭದ್ರತಾ ಪಡೆಯ ಸಿಬ್ಬಂದಿಗಳು ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರ ಕಳುಹಿಸಿದ್ದಾರೆ.
ಹಾರಂಗಿ ಗ್ರಾಮದ ಕಿರು ಸೇತುವೆ ಬಳಿಯ ಕಾವೇರಿ ದೇವಾಲಯ ಮುಂಭಾಗ ಹಾರಂಗಿ ಅಣೆಕಟ್ಟೆ ಆವರಣದಲ್ಲಿರುವ ಗೇಟ್ ಒಂದನ್ನು ಒದ್ದು ಹೊರಕ್ಕೆ ಬಂದ ಕಾಡಾನೆ ಗ್ರಾಮದೊಳಗಿನಿಂದ ಹಾದು ಸಮೀಪದ ದೊಡ್ಡತ್ತೂರು ಅರಣ್ಯ ಪ್ರದೇಶದತ್ತ ತೆರಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.