ADVERTISEMENT

ಕೊಡಗು: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 3:47 IST
Last Updated 26 ಫೆಬ್ರುವರಿ 2021, 3:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಸಿದ್ದಾಪುರ (ಕೊಡಗು ಜಿಲ್ಲೆ): ಕಾಡಾನೆ ದಾಳಿಯಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ನಡೆದಿದೆ.

ಬಿ.ಬಿ.ಟಿ.ಸಿ ಸಂಸ್ಥೆಗೆ ಸೇರಿದ ಬೀಟಿಕಾಡು ಕಾಫಿ ತೋಟದಲ್ಲಿ ಪಲ್ಪಿಂಗ್ ಕಣದಲ್ಲಿ ಸಂದೀಪ್ (22) ಹಾಗೂ ರಾಜು ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಗ್ಗಿನ ಜಾವ ಇಬ್ಬರು‌ ನಿದ್ರಿಸುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ನಡೆಸಿದೆ.

ಈ ಸಂದರ್ಭ ಕಾಡಾನೆ ಸಂದೀಪ್ ಅವರ ತಲೆಗೆ ತುಳಿದಿದೆ. ಪರಿಣಾಮ ಸಂದೀಪ್ ತಲೆಯು ಛಿದ್ರಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕ ರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿದ್ದಾಪುರ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದರು.

ನಿರಂತರ ಕಾಡಾನೆ ಹಾವಳಿ:

ಸಿದ್ದಾಪುರ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದೆ‌. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.