ಮಡಿಕೇರಿ: ಇಲ್ಲಿನ ನಾಪೋಕ್ಲು ಕೊಳಕೇರಿ ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಮಗುಚಿ ಒಬ್ಬರು ಮೃತಪಟ್ಟು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಂಜಿಲ ಗ್ರಾಮದ ಸರಸ್ವತಿ (67) ಮೃತಪಟ್ಟವರು.
ಬಸ್ ಕೊಳಕೇರಿ ಮಾರ್ಗವಾಗಿ ಮಡಿಕೇರಿಗೆ ಬಸ್ ತೆರಳುತ್ತಿತ್ತು. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಕೋಟೇರಿ ಮುಖ್ಯ ರಸ್ತೆಯ ಬದಿಯ ಹಳ್ಳಕ್ಕೆ ಬಸ್ ಮಗುಚಿದೆ. ಶಾಲಾ ಮಕ್ಕಳು ಸೇರಿದಂತೆ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ನಾಪೋಕ್ಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.