ADVERTISEMENT

ಕೊಡಗು | ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟಕ್ಕೆ ಕರೆ

ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ 5ನೇ ಹಕ್ಕೊತ್ತಾಯ ಸಮಾವೇಶ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 7:09 IST
Last Updated 25 ಆಗಸ್ಟ್ 2025, 7:09 IST
ಮಡಿಕೇರಿಯ ಬಾಲಭವನದಲ್ಲಿ ಭಾನುವಾರ ನಡೆದ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ 5ನೇ ಹಕ್ಕೊತ್ತಾಯ ಸಮಾವೇಶ ಉದ್ಘಾಟಿಸಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ  ಮಾತನಾಡಿದರು.
ಮಡಿಕೇರಿಯ ಬಾಲಭವನದಲ್ಲಿ ಭಾನುವಾರ ನಡೆದ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ 5ನೇ ಹಕ್ಕೊತ್ತಾಯ ಸಮಾವೇಶ ಉದ್ಘಾಟಿಸಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ  ಮಾತನಾಡಿದರು.   

ಮಡಿಕೇರಿ: ‘ರೈತರು, ನೌಕರರು, ಕಾರ್ಮಿಕರ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ನಾವು ಒಂದಾಗದಿದ್ದರೆ ಉಳಿಗಾಲ‌ ಇಲ್ಲ’ ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ತಿಳಿಸಿದರು.

ಇಲ್ಲಿನ ಬಾಲಭವನದಲ್ಲಿ ಭಾನುವಾರ ನಡೆದ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ 5ನೇ ಹಕ್ಕೊತ್ತಾಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ನಾವೆಲ್ಲರೂ ನಾವು ಟೊಂಕ ಕಟ್ಟಲಿಲ್ಲ ಎಂದರೆ ಕಷ್ಟ. ಎಲ್ಲರೂ ಮೊದಲು ಉದಾರೀಕರಣ, ನವ ಉದಾರೀಕರಣ, ಖಾಸಗೀಕರಣ ಹಾಗೂ ಈಗ ಬರುತ್ತಿರುವ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕುರಿತು ಅರಿವು ಪಡೆದುಕೊಳ್ಳಬೇಕು’ ಎಂದರು.

ADVERTISEMENT

ಈಗ ‘ಎಐ’ ತಂತ್ರಜ್ಞಾನ ಉತ್ಪಾದನೆ ಮತ್ತು ಸೇವಾ ರಂಗಕ್ಕೆ ಬಂದಿದೆ. ಈ ರಂಗದಲ್ಲಿ ಉದ್ಯೋಗ ಕಡಿತ ಆಗುತ್ತಿದೆ. ಪರಿಸ್ಥಿತಿ ಹೀಗಾದರೆ ನಾವು ಎಲ್ಲಿ ಹೋಗಬೇಕು?’ ಎಂದು ಪ್ರಶ್ನಿಸಿದ ಅವರು, ‘ಹಾಗೆಂದು ನಾವು ತಂತ್ರಜ್ಞಾನ ವಿರೋಧಿಗಳಲ್ಲ. ತಂತ್ರಜ್ಞಾನ ನಮ್ಮ ಅನುಕೂಲಕ್ಕೆ ಬೇಕೇ ವಿನಹಾ ನಮ್ಮ ನಾಶಕ್ಕೆ ಅಲ್ಲ’ ಎಂದು ಪ್ರತಿಪಾದಿಸಿದರು.

‘ರಾಜ್ಯದಲ್ಲಿ 7.80 ಲಕ್ಷ ಹುದ್ದೆಗಳು, ಕೇಂದ್ರದಲ್ಲಿ 50 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತುಂಬಲಿಲ್ಲ, ಪ್ರಧಾನಿ ನರೇಂದ್ರ ಮೋದಿಯೂ ಭರ್ತಿ ಮಾಡಲಿಲ್ಲ. ಹಾಗಾದರೆ, ನಮ್ಮ ಮಕ್ಕಳಿಗೆ ಕೆಲಸ ಬೇಡವಾ?’ ಎಂದೂ ಪ್ರಶ್ನಿಸಿದರು.

ಎಲ್ಲರೂ ಪ್ರಜ್ಞಾಪೂರ್ವಕವಾಗಿ, ಸಂಘಟಿತರಾಗಿ ಹೋರಾಟಕ್ಕೆ ಧುಮುಕಬೇಕಿದೆ. ಆಗ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದರು.

ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು ಈಚೆಗೆ ನಿಧನರಾದ ಹೋರಾಟಗಾರರನ್ನು ಸ್ಮರಿಸಿ, ಶ್ರದ್ಧಾಂಜಲಿ ಅರ್ಪಿಸಿದರು.

ಸಂಘದ ಕುಶಾಲನಗರ ತಾಲ್ಲೂಕು ಘಟಕದ ಕಾರ್ಯದರ್ಶಿ ವಿಜಯ್, ಪೊನ್ನಂಪೇಟೆ ತಾಲ್ಲೂಕು ಘಟಕದ ಕಾರ್ಯದರ್ಶಿ ಮಧುಸೂದನ್, ತೋಟ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್.ಟಿ.ಕುಟ್ಟಪ‍್ಪ ಭಾಗವಹಿಸಿದ್ದರು.

ಇದೇ ವೇಳೆ ಪಂಚಾಯಿತಿ ನೌಕರರ ಸಂಘಟನೆಯ ಮುಂದಿನ 3 ವರ್ಷಕ್ಕೆ 9 ಜನರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪಿ.ಆರ್.ಭರತ್, ಕಾರ್ಯದರ್ಶಿಯಾಗಿ ಮಧುಸೂದನ್, ಖಜಾಂಚಿಯಾಗಿ ವಸಂತ್‌ಕುಮಾರ್, ಉ‍ಪಾಧ್ಯಕ್ಷರಾಗಿ ಮಹದೇವ್, ಸಜಿತಾ, ವಿಂಧ್ಯಾ, ರಂಗಸ್ವಾಮಿ, ಉಪಕಾರ್ಯದರ್ಶಿಯಾಗಿ ದಿಲೀಪ್‌ಕುಮಾರ್ ಆಯ್ಕೆಯಾದರು. 

ಮುಂದಿನ 3 ವರ್ಷಗಳಿಗೆ ಪದಾಧಿಕಾರಿಗಳ ಆಯ್ಕೆ ರಾಜ್ಯಮಟ್ಟದ ಸಮಾವೇಶಕ್ಕೆ ಐವರ ಆಯ್ಕೆ  ಜಿಲ್ಲೆಯ ವಿವಿಧ ಭಾಗದ ಪಂಚಾಯಿತಿ ನೌಕರರು ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.