ಮಡಿಕೇರಿ: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ಮೂರ್ನಾಡುವಿನ ಯಶಸ್ ರೈ ಆಯ್ಕೆಯಾಗಿದ್ದಾರೆ.
ದೇಶದ ಪ್ರತಿ ರಾಜ್ಯದಿಂದ 15 ವರ್ಷದಿಂದ 28 ವರ್ಷ ವಯೋಮಿತಿವರೆಗಿನ ಈ ಅವಕಾಶದಲ್ಲಿ ಕರ್ನಾಟಕದಿಂದ ಈ ಬಾರಿ ಕೊಡಗು ಹಾಗೂ ದಕ್ಷಿಣಕನ್ನಡ ಜಿಲ್ಲೆ ಈ ಸ್ಥಾನ ಪಡೆದುಕೊಂಡಿದೆ.
ಇವರು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ರಾಯಭಾರಿಯಾಗಿ ಕರ್ನಾಟಕದಿಂದ ಪಾಲ್ಗೊಳ್ಳಲಿದ್ದಾರೆ.
ಬಿ.ಎನ್.ಲವಕುಮಾರ್ ಹಾಗೂ ಬಿ.ಬಿ.ಜಯಂತಿ ಅವರ ಪುತ್ರರಾಗಿರುವ ಇವರು ಸುಳ್ಳ ಕೆವಿಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಪಿ.ಸುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.