ADVERTISEMENT

ಯುವನಿಧಿ: ಕೊಡಗು ಜಿಲ್ಲೆಯಲ್ಲಿ 1,711 ಮಂದಿ ನೋಂದಣಿ

2025ರ ಸಾಲಿನ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ, ಭಿತ್ತಿಪತ್ರ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 6:14 IST
Last Updated 17 ಜುಲೈ 2025, 6:14 IST
ಯುವನಿಧಿ ಯೋಜನೆಯ 2025ರ ಆವೃತ್ತಿಯ ನೋಂದಣಿ ಪ್ರಕ್ರಿಯೆ ಕುರಿತ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬುಧವಾರ ಬಿಡುಗಡೆ ಮಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಮಂಜುನಾಥ್, ಇಲಾಖೆಯ ಸಿಬ್ಬಂದಿ ಮದನ್ ಭಾಗವಹಿಸಿದ್ದರು
ಯುವನಿಧಿ ಯೋಜನೆಯ 2025ರ ಆವೃತ್ತಿಯ ನೋಂದಣಿ ಪ್ರಕ್ರಿಯೆ ಕುರಿತ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬುಧವಾರ ಬಿಡುಗಡೆ ಮಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಮಂಜುನಾಥ್, ಇಲಾಖೆಯ ಸಿಬ್ಬಂದಿ ಮದನ್ ಭಾಗವಹಿಸಿದ್ದರು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಕಳೆದ ವರ್ಷ ಜನವರಿಯಿಂದ ಈ ವರ್ಷದ ಜುಲೈವರೆಗೆ 1,711 ಮಂದಿ ನೋಂದಣಿಯಾಗಿದ್ದು, ಸೌಲಭ್ಯ ಪ‍ಡೆಯುತ್ತಿದ್ದಾರೆ. ಮತ್ತೆ 2025 ರ ಸಾಲಿನ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಈ ಕುರಿತು ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ಬಿಡುಗಡೆ ಮಾಡಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭಿತ್ತಿಪತ್ರ ಬಿಡುಗಡೆ ಮಾತನಾಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ, ‘ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ 2024ರ ಜನವರಿ 1ರಂದು ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಆ ದಿಸೆಯಲ್ಲಿ 2025 ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ADVERTISEMENT

ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ₹ 3 ಸಾವಿರ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ₹ 1,500  ಪ್ರತೀ ತಿಂಗಳು ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದ್ದು, ಈ ಯೋಜನೆಗೆ ಅರ್ಹರು ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಕೋರಿದರು.

ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಮಂಜುನಾಥ್ ಮಾತನಾಡಿ, ‘ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಪ್ರಮಾಣ ಪತ್ರ ನೋಂದಣಿಗೆ ಒದಗಿಸಬೇಕು. ಪ್ರತೀ ತ್ರೈಮಾಸಿಕ 1 ರಿಂದ 25 ರೊಳಗೆ ಸ್ವಯಂ ಘೋಷಣೆ ನೀಡುವುದು ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಸಹಾಯವಾಣಿ ಸಂಖ್ಯೆ 1800-599-7154 ನ್ನು ಸಂಪರ್ಕಿಸಬಹುದು’ ಎಂದು ಹೇಳಿದರು.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್‍ನಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು. https://nad.karnataka.gov.in ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ನೋಂದಣಿಯಲ್ಲಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆಯ ವಿವರ ನೀಡಬೇಕು ಎಂದು ತಿಳಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮದನ್ ಭಾಗವಹಿಸಿದ್ದರು.

Highlights - ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟ್‌ಲ್‌ನಲ್ಲಿ ಅವಕಾಶ https://sevasindhugs.karnataka.gov.in ಸಹಾಯವಾಣಿ ಸಂಖ್ಯೆ 1800-599-7154

ಯಾರು ಅರ್ಹರು?

ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಮಂಜುನಾಥ್ ಮಾತನಾಡಿ ‘2023 2024 ಹಾಗೂ 2025ರಲ್ಲಿ ಪದವಿ ಸ್ನಾತಕೋತ್ತರ ಪದವಿ ಡಿಪ್ಲೊಮಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿದ್ದು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವು ಸಾರ್ವಜನಿಕ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ಇರದವರು ಸ್ವಯಂ ಉದ್ಯೋಗದಲ್ಲಿ ಇರದವರು ಅರ್ಹರಾಗಿದ್ದಾರೆ. ಉನ್ನತ ವ್ಯಾಸಂಗ ಮುಂದುವರಿಸದೆ ಇರುವವರು ಹಾಗೂ ಕನಿಷ್ಠ 6 ವರ್ಷ ಕರ್ನಾಟಕ ನಿವಾಸಿಯಾಗಿರುವವರು ಅರ್ಹರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಯುವನಿಧಿ ಪ್ಲಸ್’

ಕೌಶಲ್ಯ ತರಬೇತಿ ಕಾರ್ಯಕ್ರಮ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಮಂಜುನಾಥ್ ಮಾತನಾಡಿ ‘ಯುವನಿಧಿ ಪ್ಲಸ್’ ಕೌಶಲ್ಯ ತರಬೇತಿ ಕಾರ್ಯಕ್ರಮದಡಿ ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿ ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‍ಸೈಟ್ https://www.kaushalkar.com/app/registration ಕ್ಲಿಕ್ ಮಾಡಿ ಹೆಸರು ನೋಂದಾಯಿಸಿ ಕೊಳ್ಳಬಹುದು ಎಂದೂ ಅವರು ತಿಳಿಸಿದರು. ಜಿಟಿಟಿಸಿ ಕೆಜಿಟಿಟಿಐ ಸಿಡಾಕ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮುಖಾಂತರ ಸಿಎಂಕೆಕೆವೈ ಯೋಜನೆಯಡಿ ಕೌಶಲ್ಯ ಉಚಿತ ತರಬೇತಿ ನೀಡಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.