ಬಂಗಾರಪೇಟೆ: ಯರಗೋಳು ಗ್ರಾಮದ ಬಳಿ ಮಂಗಳವಾರ ಮುಂಜಾನೆ ಚಿರತೆ ನಡೆಸಿದ ದಾಳಿಯಲ್ಲಿ ಇಪ್ಪತ್ತೆರಡು ಕುರಿಗಳು ಬಲಿಯಾಗಿದೆ. ಗ್ರಾಮದ ಮುನಿಯಪ್ಪ ಎಂಬುವರಿಗೆ ಸೇರಿದ ಕುರಿಗಳನ್ನು ಅವರ ಮನೆ ಬಳಿ ಇರಿಸಲಾಗಿದ್ದ ವೇಳೆ ಚಿರತೆ ದಾಳಿ ಮಾಡಿದೆ. ದಾಳಿಯಿಂದಾಗಿ ₹ 1 ಲಕ್ಷ ನಷ್ಟವುಂಟಾಗಿದೆ ಎಂದು ಮುನಿಯಪ್ಪ ಕುಟುಂಬದವರು ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.