ADVERTISEMENT

ಜಿಂಕೆ ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 9:37 IST
Last Updated 3 ಅಕ್ಟೋಬರ್ 2017, 9:37 IST

ಕೆಜಿಎಫ್‌: ಬಿಜಿಎಂಎಲ್‌ನ ಗೋಲ್ಕಂಡ ಶಾಫ್ಟ್‌ ಬಳಿಯ ಬಾವಿಯೊಂದಕ್ಕೆ ಬಿದ್ದಿದ್ದ ಜಿಂಕೆಯನ್ನು ಅಗ್ನಿಶಾಮಕದಳದ ಸಿಬ್ಬಂದಿ ಈಚೆಗೆ ರಕ್ಷಿಸಿದ್ದಾರೆ.

ನಿರ್ಜನ ಪ್ರದೇಶದಲ್ಲಿರುವ ಬಾವಿಯಲ್ಲಿ ಜಿಂಕೆ ಬಿದ್ದಿರುವುದನ್ನು ದಾರಿಹೋಕರೊಬ್ಬರು ಕಂಡು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದರು. ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ ಸುಮಾರು ಐವತ್ತು ಅಡಿ ಆಳದಲ್ಲಿ ಬಿದ್ದಿದ್ದ ಜಿಂಕೆಯನ್ನು ಯಶಸ್ವಿಯಾಗಿ ಹೊರತೆಗೆಯಿತು.

ಗಾಬರಿಗೊಂಡಿದ್ದ ಜಿಂಕೆ ಸುಸ್ತಾಗಿದ್ದರೂ ಆರೋಗ್ಯವಾಗಿತ್ತು. ನಂತರ ಅದನ್ನು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಡಿಗೆ ಬಿಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.