ADVERTISEMENT

ನೀರು ಸಮಸ್ಯೆ: ನಗರಸಭೆಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 3:50 IST
Last Updated 21 ಮಾರ್ಚ್ 2012, 3:50 IST

ಕೋಲಾರ: ನೀರಿನ ಸಮಸ್ಯೆ ನೀಗಿಸ ಬೇಕು ಎಂದು ಆಗ್ರಹಿಸಿ ಕೋಲಾರದ ಇದ್ರಿಸ್ ಮೊಹಲ್ಲಾ ಮಹಿಳೆಯರು ನಗರಸಭೆ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿದರು.21ನೇ ವಾರ್ಡಿನಲ್ಲಿ ಕಳೆದ 6 ತಿಂಗಳಿಂದ ಕುಡಿಯುವ ನೀರು ಇಲ್ಲ ದಂತಾಗಿದೆ.
 
ಜನ ಪರದಾಡುತ್ತಿದ್ದರೂ ನಗರಸಭೆ ಸದಸ್ಯರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ವಾರ್ಡ್‌ನ ಕೊಳವೆ ಬಾವಿ ಬತ್ತಿ ಸುಮಾರು ವರ್ಷ ಕಳೆದಿವೆ. ವಾರ್ಡ್‌ಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, ಕೇವಲ ಒಂದು ವಾರಕ್ಕೆ ಒಂದು ಟ್ಯಾಂಕರ್ ಮಾತ್ರ ಬರುತ್ತದೆ. ಅಡುಗೆ ಮಾಡಲು ಸಹ ನೀರಿಲ್ಲದಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ನೀರು ಒದಗಿಸುವವರೆಗೂ ಧರಣಿ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಸಹಾಯಕ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು. ನೂರಾರು ಕುಟುಂಬಗಳು ಇರುವ  ವಾರ್ಡಿಗೆ ಕೇವಲ ಒಂದು ವಾರಕ್ಕೆ ಒಂದು ಟ್ಯಾಂಕರ್ ನೀರು ಕಳುಹಿಸಿದರೆ ಹೇಗೆ ಜೀವನ ಸಾಧ್ಯ? ಎಂದು ಪ್ರಶ್ನಿಸಿದರು.

ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವು ದಾಗಿ ನಗರಸಭೆ ಅಧ್ಯಕ್ಷೆ ನಾಜಿಯಾ ಭರವಸೆ ನೀಡಿದರೂ ಪ್ರತಿಭಟನಾಕಾ ರರು ಧರಣಿ ಮುಂದುವರಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.