ADVERTISEMENT

ಬಿಜೆಪಿಗೆ ಕೃಷ್ಣಯ್ಯ ಶೆಟ್ಟಿ:ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 6:17 IST
Last Updated 21 ಮಾರ್ಚ್ 2014, 6:17 IST

ಮಾಲೂರು: ಮಾಜಿ ಸಚಿವ ಎಸ್.­ಎನ್.­ಕೃಷ್ಣಯ್ಯಶೆಟ್ಟಿ ಅವರನ್ನು ಎರಡು ದಿನಗಳಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿ­ಕೊಳ್ಳಲು ವರಿಷ್ಠರು ಒಪ್ಪಿರುವು­ದಾಗಿ ಗುರುವಾರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸೊಣ್ಣೂರು ವೆಂಕಟೇಶ್ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯಶೆಟ್ಟಿ ಅವ­ರನ್ನು ಪುನಃ ಪಕ್ಷಕ್ಕೆ ಕರೆತರಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಕಾರ್ಯ­ಕರ್ತರು, ಮುಖಂಡರು ಒಮ್ಮತದ ಒಪ್ಪಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಗುರುವಾರ ಪಕ್ಷದ ವರಿಷ್ಠರಾದ ಅನಂತ್ ಕುಮಾರ್, ಸದಾನಂದಗೌಡ, ಆರ್.ಅಶೋಕ್ ಅವರನ್ನು ಸಮಿತಿ ಬೆಂಗಳೂರಿನಲ್ಲಿ ಭೇಟಿಯಾಗಿ ಕೃಷ್ಣಯ್ಯಶೆಟ್ಟ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಚರ್ಚಿಸಲಾಯಿತು.

ಪಕ್ಷದ ವರಿಷ್ಠರು ಮಾಜಿ ಸಚಿವ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ­ಕೊಳ್ಳಲು ಯಾವುದೇ ಅಭ್ಯಂತರವಿಲ್ಲ. ಎರಡು ದಿನಗಳ ಒಳಗಾಗಿ ನಡೆಯಲಿರುವ ಕೋರ್ ಕಮಿಟಿಯಲ್ಲಿ ಅಂತಿಮವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಸೊಣ್ಣೂರು ವೆಂಕಟೇಶ್ ತಿಳಿಸಿದರು.

ಕಾಂಗ್ರೆಸ್‌ಗೆ ಎದುರಾಳಿಗಳೇ ಇಲ್ಲ
ಮಾಲೂರು:
ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.­ಮುನಿಯಪ್ಪ ಅವರಿಗೆ ಎದುರಾಳಿಗಳೇ ಅಲ್ಲ ಎಂದು ಕಾಂಗ್ರೆಸ್ ಮುಖಂಡ ಚನ್ನಕೇಶವ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚಿಕ್ಕಕುಂತೂರು ಗ್ರಾಮದಲ್ಲಿ ಗುರುವಾರ ಹಮ್ಮಿ­ಕೊಂಡಿದ್ದ ಬೂತ್ ಮಟ್ಟದ ಕಾರ್ಯ­ಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಂದರ್ಭ ದೊಡ್ಡಕಡ­ತೂರಿನ ಉದ್ಯಮಿ ಕೆ.ಎ.ಹರಿದಾಸ್ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಗೊಂಡರು. ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ.ಮುನಿರಾಜು, ಕೆ.ಎಚ್.ಚನ್ನರಾಯಪ್ಪ, ಕೆ.ಪಿ.ಸಿ.ಸಿ ಕಾರ್ಯದರ್ಶಿ ಎಸ್.ಎನ್.­ರಘು­ನಾಥ್, ಎ.ಪಿ.ಎಂ.ಸಿ.ಅಧ್ಯಕ್ಷ ಮಹೇಶ್ ಬಾಬು, ಪುರಸಭಾ ಸದಸ್ಯರಾದ ಸಿ.ಲಕ್ಷ್ಮಿನಾರಾಯಣ, ಸಿ.ಪಿ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಟಿ.ಎಂ.ಅಶೋಕ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಬಿ.ಕೃಷ್ಣಪ್ಪ, ಮುಖಂಡರಾದ ರಾಜ­ಗೋಪಾಲರೆಡ್ಡಿ, ಶ್ರೀನಿವಾಸ­ಮೂರ್ತಿ, ಸೊಣ್ಣಹಳ್ಳಿ ಕೃಷ್ಣಪ್ಪ, ಜೂಡೊ ರಮೇಶ್, ಬೋರ್ ರಮೇಶ್, ಸಂಪತ್ ಯಾದವ್, ಮಹಿಳಾ ಘಟಕದ ಅಧ್ಯಕ್ಷೆ ಕಾಂತಮ್ಮ, ನಗರಾಧ್ಯಕ್ಷೆ ಜಯಂತಿ ಶೈಲುಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.