ADVERTISEMENT

ಮೊಬೈಲ್ ತಂತ್ರಾಂಶದಿಂದ ಬೆಳೆ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2017, 7:27 IST
Last Updated 3 ನವೆಂಬರ್ 2017, 7:27 IST
ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಬೆಳೆ ಸಮೀಕ್ಷೆ ನಡೆಸಿದರು
ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಬೆಳೆ ಸಮೀಕ್ಷೆ ನಡೆಸಿದರು   

ಟೇಕಲ್: ‘ಮೊಬೈಲ್ ತಂತ್ರಾಂಶ ಬಳಸಿ ರೈತರ ಎಲ್ಲ ಬೆಳೆಗಳ ಸಮೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ರೈತ ಸಂಪರ್ಕ ಕೇಂದ್ರದ (ಪ್ರಭಾರ) ಕೃಷಿ ಅಧಿಕಾರಿ ಪ್ರಕಾಶ್‌ಬಾಬು ಹೇಳಿದರು.

ಹೋಬಳಿ ವ್ಯಾಪ್ತಿಯ ಹಳ್ಳಿಗಳಲ್ಲಿ ಗುರುವಾರ ಬೆಳೆಗಳ ಸಮೀಕ್ಷೆ ನಡೆಸಿ ಮಾತನಾಡಿ, ‘ಪಹಣಿಯಲ್ಲಿ ಬೆಳೆಗಳ ಮಾಹಿತಿ ಕರಾರುವಕ್ಕಾಗಿ ಇಲ್ಲದ ಕಾರಣ ರೈತರು ಸರ್ಕಾರಿ ಯೋಜನೆಗಳ ಸೌಕರ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಪಹಣಿಯಲ್ಲಿನ ತಾಂತ್ರಿಕ ದೋಷ ನಿವಾರಣೆಗಾಗಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಕೃಷಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಸಮೀಕ್ಷೆ ಉತ್ತೇಜಕರು, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳು ನಿತ್ಯ ಬೆಳಿಗ್ಗೆ 6 ಗಂಟೆಗೆ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ನಡೆಸುತ್ತಾರೆ. ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಪೋಟೊ ತೆಗೆಯಲು ಪೋಟೊ ತೆಗೆಯಲು ರೈತರು ಅಧಿಕಾರಿಗಳಿಗೆ ಸಹಕರಿಸಬೇಕು. ಜತೆಗೆ ಆಧಾರ್ ಹಾಗೂ ಮೊಬೈಲ್ ಸಂಖ್ಯೆ ನೀಡಬೇಕು ಎಂದರು.

ADVERTISEMENT

ಬೆಳೆ ಸಮೀಕ್ಷೆಯಿಂದ ರೈತರಿಗೆ ಭವಿಷ್ಯದಲ್ಲಿ ಬೆಳೆ ನಷ್ಟ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಸಹಾಯವಾಗುತ್ತದೆ. ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದರೆ ಸೇರಿಸಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.