ADVERTISEMENT

ಸಿಇಟಿ ಆನ್‌ಲೈನ್ ಕೌನ್ಸೆಲಿಂಗ್ ನಾಳೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2012, 5:30 IST
Last Updated 8 ಜೂನ್ 2012, 5:30 IST

ಕೆಜಿಎಫ್: ಜೂನ್ 9ರಂದು ನಗರದ ಡಾ.ಟಿ.ತಿಮ್ಮಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಆನ್‌ಲೈನ್ ಕೌನ್ಸೆಲಿಂಗ್ ನಡೆಸಲಿದೆ.

ಪೋಷಕರು ಮತ್ತು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ತಜ್ಞರು ಉತ್ತರ ನೀಡಲಿದ್ದಾರೆ. ಕಾಲೇಜು ವತಿಯಿಂದ ಬಂಗಾರಪೇಟೆ, ಕೋಲಾರ, ಮುಳಬಾಗಲು ಮತ್ತು ಕೆಜಿಎಫ್ ನಗರದಿಂದ ಉಚಿತ ವಾಹನ ಸೌಲಭ್ಯ ಏರ್ಪಡಿಸಲಾಗಿದೆ.

ಕೋಲಾರದಿಂದ ಬೆಳಿಗ್ಗೆ ಎಂಟು ಗಂಟೆಗೆ ಹಳೇ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಡೂಂಲೈಟ್, ಎಸ್‌ಎನ್‌ಆರ್ ಆಸ್ಪತ್ರೆ, ಇಟಿಸಿಎಂ ಆಸ್ಪತ್ರೆಯಿಂದ, ಮುಳಬಾಗಲಿನಿಂದ ಸೌಂದರ್ಯ ಪಾರಡೈಸ್, ಅಂಬೇಡ್ಕರ್ ವೃತ್ತ, ಮುತ್ಯಾಲಪೇಟೆ ಮತ್ತು ಕೆಜಿಎಫ್ ರಸ್ತೆಯ ದರ್ಗಾ ಕಡೆಯಿಂದ, ಬಂಗಾರಪೇಟೆಯಿಂದ ಅಮರಾವತಿನಗರ, ಇಂದಿರಾನಗರ, ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ, ವಿವೇಕಾನಂದ ನಗರದಿಂದ ಉಚಿತ ಬಸ್‌ಗಳನ್ನು ಏರ್ಪಡಿಸಲಾಗಿದೆ. 

ಕೌನ್ಸೆಲಿಂಗ್ ಶಿಬಿರವನ್ನು ಜಿಲ್ಲಾಧಿಕಾರಿ ಡಾ.ವಿಶ್ವನಾಥ್ ಉದ್ಘಾಟಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಸೈಯದ್ ಆರೀಫ್ ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.