ಮುಳಬಾಗಿಲು: ‘ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಸಮೃದ್ಧ ಬೆಳೆ ಬೆಳೆದಿದ್ದು ರಸಗೊಬ್ಬರ ಅಭಾವ ತಲೆದೋರಿದೆ. ಟಿಎಪಿಸಿಎಂಎಸ್ನಿಂದ ವಿವಿಧ ಮಾದರಿ ರಸಗೊಬ್ಬರವನ್ನು ರೈತರಿಗೆ ನೀಡುತ್ತಿದ್ದು, ಅವಶ್ಯಕತೆ ಇರುವಷ್ಟೇ ಖರೀದಿ ಮಾಡಿದರೆ ಇತರರಿಗೆ ಅನುಕೂಲವಾಗುತ್ತದೆ’ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು.
ಟಿಎಪಿಸಿಎಂಎಸ್ ಆವರಣದಲ್ಲಿ ಗುರುವಾರ ಮಾತನಾಡಿದ ಅವರು, ಯೂರಿಯಾ ಮತ್ತು ಡಿಎಪಿ ಗೊಬ್ಬರಕ್ಕೆ ಅಭಾವ ಉಂಟಾಗಿದೆ. ಆದರೆ, ಯೂರಿಯಾ ಬೇರೆ ಕಡೆಯಿಂದ ದಾಸ್ತಾನು ತರಿಸಲಾಗಿದೆ. ಪ್ರತಿ ಕುಟುಂಬಕ್ಕೆ ಒಂದು ಆಧಾರ್ ಕಾರ್ಡ್ ಸಂಖ್ಯೆ ಪಡೆದು, ಒಬ್ಬ ರೈತನಿಗೆ 5 ಮೂಟೆ ಯೂರಿಯಾ ಖರೀದಿಗೆ ಅವಕಾಶ ಮಾಡಲಾಗಿದೆ ಎಂದುತಿಳಿಸಿದರು.
ಈಗಾಗಲೇ, ₹ 33 ಕೋಟಿ ನಷ್ಟದಲ್ಲಿರುವ ಕೋಚಿಮುಲ್ ಇಬ್ಭಾಗ ಮಾಡಿದರೆ ನಷ್ಟವನ್ನು ಎರಡು ಒಕ್ಕೂಟಗಳು ಸಮಪಾಲು ಮಾಡಿಕೊಳ್ಳಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.