ADVERTISEMENT

ಅಪಘಾತ: ಜಿ.ಪಂ. ಅಧ್ಯಕ್ಷೆ ಪುತ್ರ ಸಾವು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2018, 19:50 IST
Last Updated 29 ಸೆಪ್ಟೆಂಬರ್ 2018, 19:50 IST
ರಂಜಿತ್‌ ರೆಡ್ಡಿ
ರಂಜಿತ್‌ ರೆಡ್ಡಿ   

ಮುಳಬಾಗಿಲು: ಕೋಲಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ ಮತ್ತು ಕಾಂಗ್ರೆಸ್‌ ಬ್ಲಾಕ್‌ ಘಟಕದ ಅಧ್ಯಕ್ಷ ಆನಂದರೆಡ್ಡಿ ಅವರ ಪುತ್ರ ರಂಜಿತ್‌ ರೆಡ್ಡಿ (20) ತಮಿಳುನಾಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಬೆಂಗಳೂರಿನ ರೇವಾ ಕಾಲೇಜಿನ ಅಂತಿಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ರಂಜಿತ್‌, ಬೈಕ್‌ನಲ್ಲಿ ತಮಿಳುನಾಡಿಗೆ ಹೋಗಿದ್ದರು. ಕೃಷ್ಣಗಿರಿ ಬಳಿ ಅಪಘಾತ ಸಂಭವಿಸಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT