ADVERTISEMENT

ಅಪಘಾತ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2020, 15:51 IST
Last Updated 13 ಆಗಸ್ಟ್ 2020, 15:51 IST

ಕೋಲಾರ: ತಾಲ್ಲೂಕಿನ ಕೆ.ಬಿ ಹೊಸಹಳ್ಳಿ ಗೇಟ್ ಬಳಿ ಗುರುವಾರ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಬಡವೇ ಕಂಪನಿಯ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಅಲ್ಲಾಳಸಂದ್ರದ ಭರತ್‌ಕುಮಾರ್‌ (21) ಮತ್ತು ಮುಳಬಾಗಿಲು ತಾಲ್ಲೂಕಿನ ನಂಗಲಿಯ ಶ್ರೀನಿವಾಸ್‌ (23) ಮೃತಪಟ್ಟವರು. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಬಡವೇ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ಇವರಿಬ್ಬರೂ ನರಸಾಪುರದ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಭರತ್‌ಕುಮಾರ್‌ ಮತ್ತು ಶ್ರೀನಿವಾಸ್‌ ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಬರುತ್ತಿದ್ದಾಗ ಹಿಂಭಾಗದಿಂದ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಭರತ್‌ಕುಮಾರ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸ್‌ ಅವರನ್ನು ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಘಟನೆ ನಂತರ ಚಾಲಕ ಆಂಜಿನಪ್ಪ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದ. ವೇಮಗಲ್‌ ಪೊಲೀಸರು ಆಂಜಿನಪ್ಪನನ್ನು ಬಂಧಿಸಿ ವಾಹನ ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.