ಕೋಲಾರ: ತಾಲ್ಲೂಕಿನ ಶ್ರೀನಿವಾಸಪುರ ರಸ್ತೆಯ ಅರಿನಾಗನಹಳ್ಳಿ ಗೇಟ್ ಬಳಿ ಮಂಗಳವಾರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ವಾಹನ ಮಗುಚಿ ಬಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಡಿಎಆರ್ನ 5 ಮಂದಿ ಕಾನ್ಸ್ಟೆಬಲ್ಗಳು ಇಲಾಖೆಯ ವಾಹನದಲ್ಲಿ ಜಿಲ್ಲಾ ಕೇಂದ್ರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯ ನಿರ್ವಹಣೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳಾದ ಮಂಜುನಾಥ್, ಕೇಶವ್ ಹಾಗೂ ವೇಣು ಅವರನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡಿಎಆರ್ ವಾಹನ ಚಾಲಕ ಎದುರುಗಡೆಯಿಂದ ವೇಗವಾಗಿ ಬಂದ ಖಾಸಗಿ ವಾಹನವು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡ ಭಾಗಕ್ಕೆ ವಾಹನ ತಿರುಗಿಸಿದ್ದಾರೆ. ಈ ವೇಳೆ ಡಿಎಆರ್ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.