ADVERTISEMENT

ಕೊರೊನಾ ಪರಿಹಾರ: ದೇವರ ಮೊರೆ ಹೋದ ಲಿಂಬಾವಳಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 4:08 IST
Last Updated 9 ಜುಲೈ 2021, 4:08 IST
ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಮತ್ತು ಶಾಸಕ ಎಚ್. ನಾಗೇಶ್ ಅವರು ಸಿ. ಗೊಲ್ಲಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು
ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಮತ್ತು ಶಾಸಕ ಎಚ್. ನಾಗೇಶ್ ಅವರು ಸಿ. ಗೊಲ್ಲಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು   

ನಂಗಲಿ: ಮುದಿಗೆರೆ ಮಜರಾ ಗಡ್ಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ. ಗೊಲ್ಲಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀವೇಣುಗೋಪಾಲಸ್ವಾಮಿ ದೇವಾಲಯಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಭೇಟಿ ನೀಡಿ ದರ್ಶನ ಪಡೆದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಜನರು ನಾನಾ ಸಮಸ್ಯೆಗಳಿಗೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ವೇಣುಗೋಪಾಲ ಸ್ವಾಮಿ ಜನರ ಕಷ್ಟಗಳನ್ನು ದೂರ ಮಾಡಿ ಕೊರೊನಾವನ್ನು ಆದಷ್ಟು ಬೇಗ ದೂರ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು ಎಂದು ತಿಳಿಸಿದರು.

‘ಮನುಷ್ಯ ಕಷ್ಟಗಳಲ್ಲಿ ಸಿಲುಕಿದಾಗ ದೇವರಿಗೆ ಮೊರೆ ಹೋಗುತ್ತಾನೆ. ಆದ್ದರಿಂದ ದೇವರ ದರ್ಶನ ಪಡೆಯಲಾಯಿತು. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಜನ ಯಾವುದೇ ಶುಭ ಕಾರ್ಯಕ್ರಮ ಅಥವಾ ಸಮಾರಂಭ ಮಾಡಲು ದೇವಸ್ಥಾನದ ಆಲಯಗಳು ಸೂಕ್ತ ಸ್ಥಳಗಳಾಗಿವೆ’ ಎಂದು ಹೇಳಿದರು.

ADVERTISEMENT

ಶಾಸಕ ಎಚ್. ನಾಗೇಶ್, ಮಾಜಿ ಶಾಸಕ ವೈ. ಸಂಪಂಗಿ, ಶ್ರೀಧರ್ ರೆಡ್ಡಿ, ಜಯಚಂದ್ರರೆಡ್ಡಿ, ದೇವಾಲಯದ ಧರ್ಮದರ್ಶಿ ಪ್ರಭಾಕರ್ ರೆಡ್ಡಿ, ಜಿ.ಎ. ಮಧುಸೂಧನ್, ಮೋಹನ್, ಗ್ರಾಮ ಪಂಚಾಯಿತಿ ಸದಸ್ಯ ಅಂಬರೀಶ್, ಸುರೇಶ್ ರಾಜು, ವೃತ್ತ ನಿರೀಕ್ಷಕ ಗೋಪಾಲ ನಾಯಕ್, ಪಿಎಸ್‌ಐ ವಿ. ವರಲಕ್ಷ್ಮಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.