ಕೋಲಾರ: ‘ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಯಾರನ್ನೇ ಅಭ್ಯರ್ಥಿ ಮಾಡಿದರೂ ಪಕ್ಷಕ್ಕೆ ದ್ರೋಹ ಬಗೆಯಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ರೆಸಾರ್ಟ್ವೊಂದರಲ್ಲಿ ಆಕಾಂಕ್ಷಿಗಳಿಂದ ‘ಕೋಲಾರಮ್ಮ’ ದೇವತೆ ಹೆಸರಲ್ಲಿ ಆಣೆ ಮಾಡಿಸಿದ್ದಾರೆ.
ಈ ಕ್ಷೇತ್ರದಲ್ಲಿ ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ, ಅವರ ಪುತ್ರ ಬಿ.ವಿ. ಮಹೇಶ್, ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಸೇರಿದಂತೆ ಆರು ಮಂದಿ ಟಿಕೆಟ್ ಆಕಾಂಕ್ಷಿಗಳಿ ದ್ದಾರೆ. ಟಿಕೆಟ್ ಸಿಗದಿದ್ದರೆ ಬೇರೆ ಪಕ್ಷಕ್ಕೆ ಹೋಗುವುದಾಗಿಯೂ ಬೆಂಬಲಿಗ ರೊಂದಿಗೆ ಹೇಳಿಕೊಂಡಿದ್ದಾರೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಗುರುವಾರ ಸಂಜೆ ಎಲ್ಲಾ ಆಕಾಂಕ್ಷಿಗಳನ್ನು ರೆಸಾರ್ಟ್ಗೆ ಕರೆದು ಆಣೆ ಮಾಡಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.