ADVERTISEMENT

ನಿಂದಕರಿರಬೇಕು ಹಂದಿಯಂತೆ: ಸಚಿವ ಬಿ.ಸಿ ಪಾಟೀಲ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 21:10 IST
Last Updated 17 ನವೆಂಬರ್ 2020, 21:10 IST
ಬಿ.ಸಿ. ಪಾಟೀಲ
ಬಿ.ಸಿ. ಪಾಟೀಲ   

ಕೋಲಾರ: ಮಂಡ್ಯ ಜಿಲ್ಲೆ ಮಡುವಿನಕೋಡಿ ಗ್ರಾಮದಲ್ಲಿ ಕಾಳು ಕಟ್ಟಿರುವ (ಹೊಡೆ ಕಟ್ಟಿರುವ) ಭತ್ತದ ಬೆಳೆಗೆ ಗೊಬ್ಬರ ಹಾಕಿದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಟೀಕಿಸಿದವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ‘ನಿಂದಕರಿರಬೇಕು ಜಗದಲ್ಲಿ ಹಂದಿಯಂತೆ’ ಎಂದು ತಿರುಗೇಟು ನೀಡಿದ್ದಾರೆ.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಟೀಕೆಗಳ ವಿಷಯ ಪ್ರಸ್ತಾಪವಾಗುತ್ತಿದ್ದಂತೆಯೇ ಅವರ ಸಿಟ್ಟು ಕಟ್ಟೆಯೊಡೆಯಿತು.

‘ರೀ ಸ್ವಾಮಿ... ರೈತನ ಮಗನಾದ ನನಗೂ ಕೃಷಿಯ ಪರಿಜ್ಞಾನವಿದೆ. ರೈತರನ್ನು ಪ್ರೇರೇಪಿಸುವ ಉದ್ದೇಶಕ್ಕಾಗಿ ಗದ್ದೆಗಿಳಿದು ಭತ್ತದ ಬೆಳೆಗೆ ಗೊಬ್ಬರ ಹಾಕಿದೆ. ಆ ಗದ್ದೆಯಲ್ಲಿನ ಭತ್ತದ ಕಾಳು ಇನ್ನೂ ಬಲಿತಿರಲಿಲ್ಲ’ ಎಂದು ಸಿಟ್ಟಿನಿಂದಲೇ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.