
ಪ್ರಜಾವಾಣಿ ವಾರ್ತೆ
ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ₹20 ಲಕ್ಷ ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ರೂಪಕಲಾ ಶುಕ್ರವಾರ ಭೂಮಿಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಕೆಜಿಎಫ್ ತಾಲ್ಲೂಕಿನಲ್ಲಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ₹5 ಕೋಟಿ ಅನುದಾನದಲ್ಲಿ ಅಲ್ಪಸಂಖ್ಯಾತರ ಕಾಲೊನಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಸುವರ್ಣ ವೆಂಕಟರಾಮ್, ರಾಮಬಾಬು, ಕೆ.ಎಂ.ಕೃಷ್ಣಮೂರ್ತಿ, ಮುನಿಸ್ವಾಮಿ ರೆಡ್ಡಿ, ಜಯರಾಮ್ ರೆಡ್ಡಿ, ವೆಂಕಟರಮಪ್ಪ, ಮಂಜುನಾಥ್, ಶಿವಾರೆಡ್ಡಿ, ಕೋದಂಡರೆಡ್ಡಿ, ಮಧು, ಶೇಕ್ ಅಪ್ರೋಚ್, ಅನ್ಸರ್ ಪಾಷಾ, ನರೇಂದ್ರಬಾಬು ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.