ADVERTISEMENT

ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 16:04 IST
Last Updated 14 ಜೂನ್ 2020, 16:04 IST

ಕೋಲಾರ: ತಾಲ್ಲೂಕಿನ ನರಸಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್‌ ರಸ್ತೆಯಲ್ಲಿ ಭಾನುವಾರ ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಗರಾಜ್‌ (41) ಎಂಬುವರು ಮೃತಪಟ್ಟಿದ್ದಾರೆ.

ನರಸಾಪುರ ಗ್ರಾಮದ ನಾಗರಾಜ್‌ ಕೂಲಿ ಕಾರ್ಮಿಕರಾಗಿದ್ದರು. ಇವರು ಬೈಕ್‌ನಲ್ಲಿ ಮಧ್ಯಾಹ್ನ ತಾಲ್ಲೂಕಿನ ಜೋಡಿಕೃಷ್ಣಾಪುರದಿಂದ ನರಸಾಪುರಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸರ್ವಿಸ್‌ ರಸ್ತೆಯಲ್ಲಿ ಎದುರುಗಡೆಯಿಂದ ಬಂದ ಮತ್ತೊಂದು ಬೈಕ್‌ ನಾಗರಾಜ್‌ರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ನಾಗರಾಜ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಬೈಕ್‌ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೇಮಗಲ್‌ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.