ADVERTISEMENT

ಮಾರುಕಟ್ಟೆಯಲ್ಲಿದ್ದ ಬೈಕ್ ಕಳವು: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 5:05 IST
Last Updated 5 ಫೆಬ್ರುವರಿ 2021, 5:05 IST
   

ಮುಳಬಾಗಿಲು: ಜನನಿಬಿಡ ಮಾರುಕಟ್ಟೆಯಲ್ಲಿ ಹಾಡಹಗಲೇ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಗ್ಗಿಹೊಸಹಳ್ಳಿ ಗ್ರಾಮದ ಮುನಿರಾಜು(42) ಬಂಧಿತ.

ಬುಧವಾರ ಮಧ್ಯಾಹ್ನ ತಾಲ್ಲೂಕಿನ ಕಸಬಾ ಹೋಬಳಿಯ ಎನ್. ವಡ್ಡಹಳ್ಳಿ ಗ್ರಾಮದ ಟೊಮೆಟೊ ಮಾರುಕಟ್ಟೆ ಬಳಿ ಬೈಕ್ ಕಳವು ಮಾಡಿ ಪರಾರಿಯಾಗುತ್ತಿದ್ದ. ಖಚಿತ ಮಾಹಿತಿ ಮೇರೆಗೆ ನಂಗಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.