ADVERTISEMENT

ಇಂದು ಬರ ಅಧ್ಯಯನ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 13:29 IST
Last Updated 20 ಜನವರಿ 2019, 13:29 IST

ಕೋಲಾರ: ರೆಸಾರ್ಟ್‌ ವಾಸ ಮುಗಿಸಿದ ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ತಂಡ ಬರ ಅಧ್ಯಯನಕ್ಕೆ ಸೋಮವಾರ (ಜ.21) ಜಿಲ್ಲೆಗೆ ಆಗಮಿಸುತ್ತಿದೆ.

ಯಡಿಯೂರಪ್ಪ ನೇತೃತ್ವದ ಏಳು ನಾಯಕರ ತಂಡ ಬರಪೀಡಿತ ಜಿಲ್ಲೆಗಳಾದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಸೋಮವಾರ ಪ್ರವಾಸ ಹಮ್ಮಿಕೊಂಡಿದೆ. ತಂಡದಲ್ಲಿ ಬಿ.ಎನ್.ಬಚ್ಚೇಗೌಡ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಎನ್‌.ರವಿಕುಮಾರ್, ಮರಿಸ್ವಾಮಿ, ಜಯದೇವ್, ವೆಂಕಟಮುನಿಯಪ್ಪ ಇದ್ದಾರೆ.

ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡಮಲೆಗೆ ಬೆಳಿಗ್ಗೆ 11ಕ್ಕೆ ಆಗಮಿಸುವ ತಂಡದ, ಗಣಪತಿಸ್ವಾಮಿಗೆ ಪೂಜೆ ಸಲ್ಲಿಸಿ, ಮಧ್ಯಾಹ್ನ 12ಕ್ಕೆ ಅಯ್ದ ಬರಪಡೀತ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚೆ ನಡೆಸುತ್ತಾರೆ. ನಂತರ ಮಧ್ಯಾಹ್ನ 1ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಬರ ಪರಿಸ್ಥಿತಿಯ ಸಭೆ ನಡೆಸಿ ಮಾಹಿತಿ ಪಡೆಯಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.