ADVERTISEMENT

ಬಿಜೆಪಿ ಜನಪ್ರತಿನಿಧಿಗಳಿಂದ ತಿಂಗಳ ವಸೂಲಿ

​ಪ್ರಜಾವಾಣಿ ವಾರ್ತೆ
Published 22 ಮೇ 2020, 14:55 IST
Last Updated 22 ಮೇ 2020, 14:55 IST
ಕೆ.ವೈ.ನಂಜೇಗೌಡ
ಕೆ.ವೈ.ನಂಜೇಗೌಡ   

ಕೋಲಾರ: ‘ಗಾಳಿಯಲ್ಲಿ ಗೆದ್ದು ಬಂದ ಜನಪ್ರತಿನಿಧಿಗಳು ಬ್ಲಾಕ್‌ಮೇಲ್‌ ತಂತ್ರದ ಮೂಲಕ ಜಿಲ್ಲೆಯಲ್ಲಿ ಅಧಿಕಾರ ನಡೆಸುತ್ತಿದ್ದಾರೆ’ ಎಂದು ಶಾಸಕ ಕೆ.ವೈ.ನಂಜೇಗೌಡ ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹಾಗೂ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಆ ಜನಪ್ರತಿನಿಧಿಗಳಿಂದ ತಿಂಗಳ ವಸೂಲಿ ನಡೆಯುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಬಿಜೆಪಿ ಸಚಿವರು ಮತ್ತು ಸಂಸದರು ಅಧಿಕಾರಿಗಳಿಗೆ ಪರ್ಸೆಟೆಂಜ್‌ ನಿಗದಿಪಡಿಸಿ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಅನಿವಾರ್ಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಗಾಳಿಯಲ್ಲಿ ಗೆದ್ದು ಬಂದ ಜನಪ್ರತಿನಿಧಿಗಳಿಗೆ ಶರಣಾಗಿದ್ದಾರೆ’ ಎಂದು ಟೀಕಿಸಿದರು.

ADVERTISEMENT

‘ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಂಗ್ರೆಸ್ ಶಾಸಕರನ್ನು ಸಚಿವರು ಹಾಗೂ ಸಂಸದರು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಾಖಲೆಪತ್ರ ಸಮೇತ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.