ADVERTISEMENT

ಬೆಂಬಲ ಬೆಲೆಗೆ ಭತ್ತ ಖರೀದಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 15:46 IST
Last Updated 9 ಡಿಸೆಂಬರ್ 2020, 15:46 IST

ಕೋಲಾರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಸರ್ಕಾರ ಆದೇಶಿಸಿದ್ದು, ಜಿಲ್ಲೆಗೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ.

ರೈತರಿಂದ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ₹ 1,868 ಹಾಗೂ ಗ್ರೇಡ್-ಎ ಭತ್ತಕ್ಕೆ ₹ 1,888 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಭತ್ತ ಖರೀದಿಸಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ರೈತರು ನೋಂದಣಿ ಕೇಂದ್ರಗಳಲ್ಲಿ ಡಿ.30ರೊಳಗೆ ಹೆಸರು ನೋಂದಣಿ ಮಾಡಿಸಬೇಕು. ಕೋಲಾರ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ನಂತರ ಭತ್ತ ತಲುಪಿಸಬೇಕಾದ ಅಕ್ಕಿ ಗಿರಣಿಗಳ ವಿವರವನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುತ್ತದೆ. ಬಳಿಕ ರೈತರು ತಮ್ಮ ಭತ್ತವನ್ನು ಗ್ರೇಡರ್‌ಗಳಿಂದ ಪರೀಕ್ಷಿಸಿ, ಗುಣಮಟ್ಟದ ಪ್ರಮಾಣಪತ್ರ ಪಡೆದು ಅಕ್ಕಿ ಗಿರಣಿಗಳಿಗೆ ಸರಬರಾಜು ಮಾಡಬೇಕು. ರೈತರ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮೂಲಕ ಹಣ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.