ADVERTISEMENT

ಮಕ್ಕಳು ಸಂಸ್ಕೃತಿಯ ಕೇಂದ್ರ ಬಿಂದು: ಶ್ರೀಶೈಲನ್

ಚಿನ್ಮಯ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ, ವೇಷಧಾರಿಗಳ ಸ್ವರ್ಧೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2018, 13:07 IST
Last Updated 2 ಸೆಪ್ಟೆಂಬರ್ 2018, 13:07 IST
ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಕೋಲಾರ ಚಿನ್ಮಯ ಶಾಲೆಯಲ್ಲಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಕೋಲಾರ ಚಿನ್ಮಯ ಶಾಲೆಯಲ್ಲಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.   

ಕೋಲಾರ: ನಗರದ ಚಿನ್ಮಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಭಾನುವಾರ ಕೃಷ್ಣ ಮತ್ತು ರಾಧೆ ವೇಷಧಾರಿಗಳ ಸ್ವರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಿವೇಕ ಸಂಪದ ಪ್ರಚಾರಕ ಶ್ರೀಶೈಲನ್, ‘ಮಕ್ಕಳು ಸಂಸ್ಕೃತಿಯ ಕೇಂದ್ರ ಬಿಂದು. ವಿದೇಶಿ ಸಂಸ್ಕೃತಿಗೆ ಮಾರುಹೋಗದಂತೆ ಪೋಷಕರು ಎಚ್ಚರವಹಿಸಬೇಕು’ ಎಂದು ಸಲಹೆ ನೀಡಿದರು.

‘ಮಕ್ಕಳಲ್ಲಿ ಹೊಸತನ, ಸನಾತನ ಪರಂಪರೆಯ ಅರಿವು ಮೂಡಿಸಬೇಕು. ಅವರಲ್ಲಿ ದೇವರನ್ನು ಕಾಣಬೇಕು ಎಂಬ ಮಾತು ನಿಜ. ನೀವೆಲ್ಲಾ ಬಾಲ ಕೃಷ್ಣರು ಇದ್ದಂತೆ. ಕೃಷ್ಟ ರಾಧೆಯರ ವೇಷಧಾರಿಗಳಾಗಿ ಬಂದಿರುವ ಮಕ್ಕಳು ನೂರಾರು ಕೃಷ್ಣರಂತೆ ಕಂಗೊಳಿಸುತ್ತಿದ್ದಾರೆ. ಇದೇ ರೀತಿ ಎಲ್ಲಾ ಶಾಲೆಗಳಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸುವ ಮೂಲಕ ಮಕ್ಕಳಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಮೂಡಿಸುವ ಕೆಲಸ ಅಗಬೇಕು’ ಎಂದರು.

ADVERTISEMENT

‘ಸ್ವರ್ಧೆಗಳ ಮೂಲಕ ನೂರಾರು ಶಾಲಾ ಮಕ್ಕಳಿಗೆ ಗೀತೆಯ ಸಾರವನ್ನು ತಿಳಿಸಿಕೊಡುವ ಈ ಶಾಲೆ ನಮ್ಮ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದು ಶ್ಲಾಘಿಸಿದರು.

‘ಸನಾತನ ಸಂಸ್ಕೃತಿಯನ್ನು ಉಳಿಸುವ ಭಾಗವಾಗಿ ಭಗವದ್ಗೀತಾ ಸ್ವರ್ಧೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ’ ಎಂದು ಚಿನ್ಮಯ ವಿದ್ಯಾಲಯದ ಅಧ್ಯಕ್ಷ ಪಿ.ಚಂದ್ರಪ್ರಕಾಶ್ ತಿಳಿಸಿದರು.

‘ಜಿಲ್ಲೆಯ ಶಾಲಾ ಮಕ್ಕಳು ಭಗವದ್ಗೀತೆಯನ್ನು ಕಲಿಯುವ ಪೂರಕ ವಾರಾವರಣ ಶಾಲೆಯಲ್ಲಿ ಇದೆ. ಗೀತೆಯ ಸ್ಮರಣೆ, ಅದರ ಮಹತ್ವ ಮಕ್ಕಳಿಗೆ ತಿಳಿಯುವಂತಾಗಲು ಸಂಸ್ಥೆ ಸ್ವರ್ಧೆಗಳನ್ನು ಆಯೋಜಿಸಿಕೊಂಡು ಬಂದಿದೆ’ ಎಂದು ವಿವರಿಸಿದರು.

ಶಾಲೆಯ ಆವರಣದಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ನಡೆಯಿತು. ಕೃಷ್ಣನಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ಪ್ರಾಂಶುಪಾಲ ಅನಂತಪದ್ಮನಾಭ್, ಶಿಕ್ಷಕರಾದ ಡಿ.ಎನ್.ಸುಧಾಮಣಿ, ನರಸಿಂಹಪ್ರಸಾದ್, ಕನಕಮ್ಮ, ಶೈಲಜಾ, ಅಶ್ವಿನಿ, ಸುನೀತಾ, ರವಿಶಂಕರ್ ಅಯ್ಯರ್, ರಮೇಶ್, ಶ್ರೀನಿವಾಸ್, ಸುರೇಶ್, ಬಸವರಾಜ್, ಸೌಮ್ಯ,ಲಕ್ಷ್ಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.