ADVERTISEMENT

ಬೆಲೆ ಏರಿಕೆ ಖಂಡಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 3:52 IST
Last Updated 7 ಮಾರ್ಚ್ 2021, 3:52 IST
ಮಾಲೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಧರಣಿ ನಡೆಸಿ ತಹಶಿಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು
ಮಾಲೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಧರಣಿ ನಡೆಸಿ ತಹಶಿಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು   

ಮಾಲೂರು: ಬಗರ್ ಹುಕಂ ಸಾಗುವಳಿ ಹಕ್ಕು ಪತ್ರಗಳಿಗಾಗಿ ಪಿ ನಂಬರ್ ತಿದ್ದುಪಡಿ, ನಿವೇಶನ ರಹಿತ ರೈತರಿಗೆ ನಿವೇಶನ ಈಡೇರಿಸುವಂತೆ ಒತ್ತಾಯಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶನಿವಾರ ಧರಣಿ ನಡೆಸಿದರು.

ಸಂಘಟನೆಯ ತಾಲ್ಲೂಕು ಅಧ್ಯಕ್ಷ ಮುನಿಸ್ವಾಮಿಗೌಡ ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಲೋಕಸಭೆಯಲ್ಲಿ
ಚರ್ಚಿಸದೆ ಜಾರಿಗೆ ತರಲುಸುಗ್ರೀವಾಜ್ಞೆ ತಂದಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮನಸೋ ಇಚ್ಚೆ ಕಾಯ್ದೆಯನ್ನು ಜಾರಿಗೆ ಮಾಡಲು ಹೊರಟಿದೆ. ಈ ಕಾಯ್ದೆಗಳಿಂದ ರೈತಾಪಿ ವರ್ಗಕ್ಕೆ ಭಾರಿ ಹಾನಿಯುಂಟು ಮಾಡುವುದರಿಂದ ರೈತರು ಈ ಕಾಯ್ದೆಯಿಂದ ಸಮಾಧಿಯಾಗುವುದು ಶತಸಿದ್ದ. ಕೇಂದ್ರ ಸರ್ಕಾರದ ವಿರುದ್ಧ ಹಗಲು ರಾತ್ರಿ ಎನ್ನದೆ ಲಕ್ಷಾಂತರ ರೈತರು ಈ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೊರಾಟದಿಂದ ನೂರಾರು ರೈತರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಸಂಘಟಕರಾದ ವೆಂಕಟಪ್ಪ, ಚಲಪತಿ, ರಾಜಪ್ಪ, ವೆಂಕಟೇಶ್, ಸಿಂಹರಾಜು, ಚಂದ್ರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.