ಕೋಲಾರ: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷಗಾದಿಯ ಚುನಾವಣೆಗೆ ಗೈರಾಗಿ ವಿಪ್ ಉಲ್ಲಂಘಿಸಿದ ಕಾರಣಕ್ಕೆ ಕಾಂಗ್ರೆಸ್ನ 3 ಮಂದಿ ನಗರಸಭಾ ಸದಸ್ಯರನ್ನು ಪಕ್ಷದಿಂದ ಅಮಾನತು ಮಾಡಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಭಾನುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
31ನೇ ವಾರ್ಡ್ ಸದಸ್ಯ ಸೈಯದ್ ಅಫ್ಜರ್, 33ನೇ ವಾರ್ಡ್ ಸದಸ್ಯೆ ನಾಜೀಯಾ ತಾಜ್ ಮತ್ತು 34ನೇ ವಾರ್ಡ್ ಸದಸ್ಯೆ ಮುಬೀನಾ ತಾಜ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ಎಲ್ಲಾ ಸದಸ್ಯರಿಗೆ ಚುನಾವಣೆಯಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿತ್ತು. ಆದರೆ, ಈ ಮೂವರು ಚುನಾವಣೆಗೆ ಗೈರಾಗಿ ವಿಪ್ ಉಲ್ಲಂಘಿಸಿದ ಕಾರಣ ಅಮಾನತು ಮಾಡಲಾಗಿದೆ ಎಂದು ಚಂದ್ರಾರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.