ಶ್ರೀನಿವಾಸಪುರ: ಪಟ್ಟಣದ ಪ್ರಸಾದ್ ರಸ್ತೆಯ ನಿವಾಸಿ ಶ್ರೀನಿವಾಸ್ (55) ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀನಿವಾಸ್ ಪಟ್ಟಣದಲ್ಲಿ ಉಪ್ಪಿನ ವ್ಯಾಪಾರ ಮಾಡುತ್ತಿದ್ದರು. ಹೆಂಡತಿ ಹಾಗೂ ಮಗಳೊಂದಿಗೆ ಜೀವನ ನಡೆಸುತ್ತಿದ್ದರು. ಅವರ ಪತ್ನಿಗೆ ಜ್ವರ ಕಾಣಿಸಿಕೊಂಡಿತು. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸಹೋದರ ಶ್ರೀರಾಮಪ್ಪ ನೀಡಿರುವ ದೂರಿನ ಮೇರೆಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಪೊಲೀಸ್ಇನ್ಸ್ಪೆಕ್ಟರ್ ಸಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.