ADVERTISEMENT

ಕೋವಿಡ್‌ ಮಹಾಮಾರಿ: ದೇಶ ತಲ್ಲಣ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 14:54 IST
Last Updated 17 ಜೂನ್ 2021, 14:54 IST
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರು ಹಾಗೂ ಆಂಬುಲೆನ್ಸ್‌ ಸಿಬ್ಬಂದಿಗೆ ಗುರುವಾರ ದಿನಸಿ ವಿತರಿಸಲಾಯಿತು
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರು ಹಾಗೂ ಆಂಬುಲೆನ್ಸ್‌ ಸಿಬ್ಬಂದಿಗೆ ಗುರುವಾರ ದಿನಸಿ ವಿತರಿಸಲಾಯಿತು   

ಕೋಲಾರ: ನಗರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರು, ಆಂಬುಲೆನ್ಸ್‌ ಸಿಬ್ಬಂದಿ ಹಾಗೂ ಅಂಗವಿಕಲರಿಗೆ ಇಲ್ಲಿ ಗುರುವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ದಿನಸಿ ಕಿಟ್‌ ವಿತರಿಸಲಾಯಿತು.

‘ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರು ಹಾಗೂ ಜೀವದ ಹಂಗು ತೊರೆದು ಕೆಲಸ ಮಾಡಿದವರಿಗೆ ನೆರವಾಗುವುದು ಹೃದಯವಂತಿಕೆ’ ಎಂದು ವಿಶ್ವ ಹಿಂದೂ ಪರಿಷತ್‌ ರಾಜ್ಯ ಕಾರ್ಯದರ್ಶಿ ಬಸವರಾಜ್ ಅಭಿಪ್ರಾಯಪಟ್ಟರು.

‘ಕೋವಿಡ್‌ ಮಹಾಮಾರಿಯಿಂದ ಇಡೀ ದೇಶ ತಲ್ಲಣಗೊಂಡಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಶಕ್ತಿಮೀರಿ ಕೆಲಸ ಮಾಡುತ್ತಿದೆ. ಸರ್ಕಾರದ ಜತೆ ಹಲವು ಸಂಘಟನೆಗಳು ಕೈಜೋಡಿಸಿವೆ’ ಎಂದು ತಿಳಿಸಿದರು.

ADVERTISEMENT

‘ಕೋವಿಡ್ ಇಡೀ ಜಗತ್ತನ್ನು ತಲ್ಲಣಗೊಳಿಸಿದೆ. ಇದರಿಂದ ಭಾರತ ದೇಶ ಹೊರತಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿವೆ. ಸರ್ಕಾರದ ಕಾರ್ಯದಲ್ಲಿ ಹಿಂದೂಪರ ಸಂಘಟನೆಗಳು ಕೈಜೋಡಿಸಿ ಸೋಂಕಿತರಿಗೆ ನೆರವಾಗುವ ಸಾಮಾಜಿಕ ಕಾಳಜಿ ತೋರುತ್ತಿವೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತುಮಕೂರು ವಿಭಾಗೀಯ ಸಂಘ ಚಾಲಕ್ ಡಾ.ಶಂಕರ್‌ನಾಯಕ್ ಹೇಳಿದರು.

ವಿಶ್ವ ಹಿಂದೂ ಪರಿಷತ್‌ ಸದಸ್ಯರಾದ ಡಾ.ಶಿವಣ್ಣ, ನಂದೀಶ್, ಬಜರಂಗದಳ ಸದಸ್ಯರಾದ ಬಾಬು, ಬಾಲಾಜಿ, ಪವನ್, ಅನಂತ್, ನಾಣಿ, ವೆಂಕಿ, ಅಭಿಷೇಕ್, ವಿಜಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.