ADVERTISEMENT

ಜಿಲ್ಲೆಯಲ್ಲಿ ಕೋವಿಡ್‌ ರುದ್ರ ತಾಂಡವ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 18:27 IST
Last Updated 22 ಜೂನ್ 2021, 18:27 IST

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ರುದ್ರ ತಾಂಡವ ಮುಂದುವರಿದಿದ್ದು, ಮಂಗಳವಾರ 9 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಸೋಂಕಿತರ ಸಾವಿನ ನಾಗಲೋಟಕ್ಕೆ ಆರೋಗ್ಯ ಇಲಾಖೆ ಬೆಚ್ಚಿ ಬಿದ್ದಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಸರಣಿ ಸಂಭವಿಸುತ್ತಿದ್ದು, ಸೋಮವಾರವಷ್ಟೇ 4 ಸೋಂಕಿತರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ 9 ಸೋಂಕಿತರು ಅಸುನೀಗಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 493ಕ್ಕೆ ಏರಿಕೆಯಾಗಿದೆ.

ಮಾಲೂರು, ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಉಳಿದಂತೆ ಕೋಲಾರ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಅಸುನೀಗಿದ್ದಾರೆ.
ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,298ಕ್ಕೆ ಇಳಿದಿದೆ.

ADVERTISEMENT

ಕೋಲಾರ ತಾಲ್ಲೂಕಿನ 17 ಮಂದಿಗೆ, ಮಾಲೂರು ತಾಲ್ಲೂಕಿನ 23 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ ಇಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 7 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 5,845ಕ್ಕೆ ಜಿಗಿದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 113 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 18 ಮಂದಿ, ಮಾಲೂರು ತಾಲ್ಲೂಕಿನ 25, ಬಂಗಾರಪೇಟೆ ತಾಲ್ಲೂಕಿನ 12, ಕೆಜಿಎಫ್‌ ತಾಲ್ಲೂಕಿನ 22, ಮುಳಬಾಗಿಲು ತಾಲ್ಲೂಕಿನ 28 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 8 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.