ADVERTISEMENT

ಸೋಂಕಿತರ ಸಾವಿನ ಸಂಖ್ಯೆ 606ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 12:33 IST
Last Updated 13 ಆಗಸ್ಟ್ 2021, 12:33 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಶುಕ್ರವಾರ 3 ಮಂದಿ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಕೋಲಾರ ತಾಲ್ಲೂಕಿನ ಒಬ್ಬರು ಹಾಗೂ ಮುಳಬಾಗಿಲು ತಾಲ್ಲೂಕಿನ ಇಬ್ಬರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 606ಕ್ಕೆ ಏರಿಕೆಯಾಗಿದೆ. ಸೋಂಕಿತರ ಸರಣಿ ಸಾವಿನ ಬೆನ್ನಲ್ಲೇ ಹೊಸದಾಗಿ 27 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 239ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ 6 ಮಂದಿಗೆ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನ 4 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 13 ಮಂದಿಗೆ ಮತ್ತು ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 33 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 10 ಮಂದಿ, ಮಾಲೂರು, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 5 ಮಂದಿ, ಕೆಜಿಎಫ್‌ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.