ADVERTISEMENT

ಸೋಂಕಿತರ ಸಾವಿನ ಸಂಖ್ಯೆ 609ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 15:38 IST
Last Updated 14 ಆಗಸ್ಟ್ 2021, 15:38 IST

ಕೋಲಾರ: ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 609ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬಂಗಾರಪೇಟೆ, ಕೆಜಿಎಫ್‌ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 18 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 239ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ ಇಬ್ಬರಿಗೆ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ, ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಮೂವರಿಗೆ, ಕೆಜಿಎಫ್‌ ತಾಲ್ಲೂಕಿನ 8 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 11 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 2, ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.