ಮಾಲೂರು: ಕೇಂದ್ರ ಸರ್ಕಾರದಿಂದ ಕಡಿಮೆ ದರದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಬಿಜೆಪಿ ಯುವ ಘಟಕದ ಅಧ್ಯಕ್ಷ ವೇಣುಗೋಪಾಲ್ ತಿಳಿಸಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿಯನ್ನು ಗ್ರಾಹಕರಿಗೆ ವಿತರಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿ ಬಡ ಹಾಗೂ ಮಾಧ್ಯಮದ ವರ್ಗದ ಜನತೆಗೆ ಕಡಿಮೆ ದರದಲ್ಲಿ ಒಂದು ಕೆಜಿ ₹29 ರಂತೆ 10 ಕೆಜಿ ಅಕ್ಕಿ ಪ್ಯಾಕೆಟ್ ಅನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅದರಂತೆ ಪಟ್ಟಣದ ಮುಖ್ಯ ರಸ್ತೆಯ ಬಿಗ್ ಬಾಸ್ಕೆಟ್ ಸಂಕೀರ್ಣದಲ್ಲಿ ಅಕ್ಕಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ಸೋಮಶೇಖರ್, ಬಿಜೆಪಿ ಯುವ ಘಟಕದ ನಾಗೇಶ್ ವಿನೋದ್, ಇನ್ನಿತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.