ADVERTISEMENT

ಗುರು ವಂದನೆ, ಸ್ನೇಹ ಸಮ್ಮಿಲನ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 15:01 IST
Last Updated 27 ಏಪ್ರಿಲ್ 2025, 15:01 IST
ಬೇತಮಂಗಲ ಸಮೀಪದ ಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳಿಂದ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ನಡೆಯಿತು
ಬೇತಮಂಗಲ ಸಮೀಪದ ಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳಿಂದ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ನಡೆಯಿತು   

ಬೇತಮಂಗಲ: ಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ  ಭಾನುವಾರ ಹಮ್ಮಿಕೊಳ್ಳಲಾಗಿತ್ತು.

2000-01ನೇ ಸಾಲಿನ ವಿದ್ಯಾರ್ಥಿಗಳಿಂದ ಗುರು ವಂದನಾ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವೇಳೆ ನಿವೃತ್ತ ಶಿಕ್ಷಕರು ಮಾತನಾಡಿ, ಗುರು–ಹಿರಿಯರನ್ನು ಯಾರು ಗೌರವಿಸುತ್ತಾರೋ ಅವರು ಜೀವನದಲ್ಲಿ ಉನ್ನತ ಸ್ಥಾನಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ADVERTISEMENT

ಸನ್ಮಾನ ಸ್ವೀಕರಿಸಿದ ಶಿಕ್ಷಕರು: ಶಾಲೆ ಶಿಕ್ಷಕರಾಗಿ ಕೆಲಸ ಮಾಡಿ ನಿವೃತ್ತಿಯಾದ ಜಿ.ಕೆ.ವೆಂಕಟರವಣಪ್ಪ, ಆರ್.ವೆಂಕಟರವಣಪ್ಪ, ಜೆ.ರಾಮಯ್ಯ, ಬಿ.ಎಂ.ಬಾಲಚಂದ್ರ, ಎಸ್.ಗೀತಮ್ಮ, ಕಟ್ಟಿಗೆ ಮಲ್ಲಪ್ಪ ವೀರಭದ್ರಪ್ಪ, ಕೆ.ಎಂ.ನಾರಾಯಣಸ್ವಾಮಿ ಅವನ್ನು ಸತ್ಕರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.